ಬೆಂಗಳೂರು:- ಹೆಚ್ ಡಿ ಕುಮಾರಸ್ವಾಮಿ ಹಾಗೂ ದೇವರಾಜೇಗೌಡ ವಿರುದ್ಧ SIT ಗೆ ಕಾಂಗ್ರೆಸ್ ದೂರು ನೀಡಿದೆ.
ಅಶ್ಲೀಲ ವಿಡಿಯೋ ವೈರಲ್: ಸೈಬರ್ ಕ್ರೈಂ ಗೆ ದೂರು ನೀಡಿದ ನಟಿ ಜ್ಯೋತಿ ರೈ..!
ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಪ್ರಕಾಶ್ ಅವರು ಮಾಧ್ಯಮಗಳ ಬಂದ ವರದಿಯನ್ನು ಆಧಾರಿಸಿ ದೂರು ನೀಡಿದ್ದಾರೆ.
ದೇವರಾಜೇಗೌಡ ಹಾಗೂ ಕುಮಾರಸ್ವಾಮಿ ಅವರು ಎಸ್ಐಟಿ ವಿರುದ್ಧ ಹೇಳಿಕೆ ನೀಡುವ ಮೂಲಕ ತನಿಖೆಯ ದಾರಿಯನ್ನು ತಪ್ಪಿಸಿ ಪರೋಕ್ಷವಾಗಿ ಆರೋಪಿಗಳ ರಕ್ಷಣೆಗೆ ನಿಂತಿದ್ದಾರೆ.
ಕುಮಾರಸ್ವಾಮಿ ಅವರಿಗೆ ಪ್ರಜ್ವಲ್ ರೇವಣ್ಣ ಅತ್ಯಾಚಾರದ ಬಗ್ಗೆ ತಿಳಿದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಸಂತ್ರಸ್ತೆಯರು ಕೆಕೆ. ಗೆಸ್ಟ್ ಹೌಸ್ ನಲ್ಲಿ ಇದ್ದಾರೆಂದು ಹೇಳಿಕೆ ಕೊಡುವ ಮೂಲಕ ಸಂತ್ರಸ್ತೆ ಬಗ್ಗೆ ಮಾಹಿತಿ ಕೊಡುವ ಕೆಲಸ ಮಾಡುತ್ತಿದ್ದಾರೆ
ದೇವರಾಜೇಗೌಡ ಮತ್ತು ಕುಮಾರಸ್ವಾಮಿ ಅವರು ಮಹಿಳೆಯರ ಅಶ್ಲೀಲ ಚಿತ್ರಗಳನ್ನು ಚಿತ್ರೀಕರಿಸಿಕೊಂಡಿರುವ ಆರೋಪಿ ವಿರುದ್ಧ ದೂರು ನೀಡದೇ ವಿಡಿಯೋ ಹಂಚಿರುವ ವ್ಯಕ್ತಿಗಳನ್ನು ಮಾತ್ರ ಗುರುತಿಸಿ ಕ್ರಮ ಕೈಗೊಳ್ಳಲು ಆಗ್ರಹಿಸುತ್ತಿದ್ದಾರೆ ಎಂದು ದೂರಿನಲ್ಲ ಆರೋಪಿಸಿದ್ದಾರೆ ಎಂದು ತಿಳಿದು ಬಂದಿದೆ.