ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಕರ್ನಾಟಕವನ್ನು ಪಾಕಿಸ್ಥಾನಕ್ಕಿಂತ ಕಡೆ ಮಾಡುತ್ತಿದ್ದಾರೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಕಿಡಿ ಕಾರಿದರು. ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಹನುಮಾನ್ ಚಾಲೀಸ್ ಪಠಿಸಿದವರ ಮೇಲೆ ಎಫ್ ಐಆರ್ ಹಾಕಿರುವ ಬಗ್ಗೆ ಹೀಗೆ ಕಠೋರ ಪ್ರತಿಕ್ರಿಯೆ ನೀಡಿದರು.
ಇವರೇನು ಕರ್ನಾಟಕವನ್ನು ಆಳುತ್ತಿದ್ದಾರೋ? ಅಥವಾ ಮೂಲಭೂತವಾದಿ ಇಸ್ಲಾಮಿಕ್ ರಾಷ್ಟ್ರವನ್ನು ಆಳುತ್ತಿದ್ದಾರೋ? ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ರಾಜ್ಯ ಸರ್ಕಾರ ಕೂಡಲೇ ಹನುಮಾನ್ ಚಾಲೀಸ್ ಪಠಿಸಿದವರ ಮೇಲೆ ಎಫ್ಐಆರ್ ಹಾಕಿರುವುದನ್ನು ಕೈ ಬಿಡಬೇಕು ಎಂದು ಸಚಿವ ಜೋಶಿ ಆಗ್ರಹಿಸಿದರು.
ಕಾಫಿ ಪ್ರಿಯರಿಗೆ ಗುಡ್ ನ್ಯೂಸ್..! ಪ್ರತಿದಿನ 3 ಕಪ್ ಫಿಲ್ಟರ್ ಕಾಫಿ ಕುಡಿದರೆ ಡಯಾಬಿಟಿಸ್ ಕಂಟ್ರೋಲ್
ಬೆಳಕು ಹರಿಯುವ ಮೊದಲೇ 6 ಗಂಟೆಗೂ ಮುನ್ನ ಆ ಕೋಮಿನವರು ನಮಾಜ್ ಮಾಡಬಹುದು. ಆದರೆ, ಹಿಂದೂಗಳು ಹನುಮಾನ್ ಚಾಲೀಸ್ ಹಾಕುವುದು ತಪ್ಪೇ? ಎಂದು ಜೋಶಿ ಪ್ರಶ್ನಿಸಿದರು. ಕಾಂಗ್ರೆಸ್ ತುಷ್ಟಿಕರಣದ ಪರಕಾಷ್ಟೆ ತಲುಪಿದೆ. ರಾಜ್ಯದ ಜನ ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಸಚಿವ ಪ್ರಹ್ಲಾದ ಜೋಶಿ ಕರೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಯಾವ ರಾಜ್ಯದಲ್ಲಿ ಇದ್ದೀರಿ? ಕೂಡಲೇ ಹನುಮಾನ್ ಚಾಲೀಸ್ ಪಠಿಸಿದ ಅಂಗಡಿಯಾತನ ಮೇಲೆ ಹಾಕಿರುವ ಎಫ್ಐಆರ್ ಕೈ ಬಿಟ್ಟು, ಆತನನ್ನು ಪ್ರಕಾರಣದಿಂದ ಮುಕ್ತಗೊಳಿಸಿ ಎಂದು ಸಚಿವ ಜೋಶಿ ಅಗ್ರಹಿಸಿದರು.