ಹುಬ್ಬಳ್ಳಿ: ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ನೇರವಾಗಿ ಕಾಂಗ್ರೆಸ್ ಸರ್ಕಾರ ಇಂತಹ ಮತಾಂತರ ಶಕ್ತಿಗಳಿಗೆ ಬೆಂಬಲ ನೀಡುತ್ತಿದೆ. ಕೇರಳ ಸರ್ಕಾರದ ಮಾದರಿಯಲ್ಲಿ ಈ ಸರ್ಕಾರ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರಿಂದಾಗಿ ಇಂದು ಕುಟುಂಬಗಳು ಭಯದಿಂದ ಜೀವನ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹುಬ್ಬಳ್ಳಿಯಲ್ಲಿ ದಲಿತ ಅಪ್ರಾಪ್ತ ಬಾಲಕಿಯ ಮೇಲೆ ಸದ್ದಾಂ ಎನ್ನುವ ವ್ಯಕ್ತಿ ಅತ್ಯಾಚಾರ ಮಾಡಿದ್ದಾನೆ. ಇದು ಕೂಡ ಲವ್ ಜಿಹಾದ್ ಪ್ರಕರಣವಾಗಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ನಾಯಕರು ಇಲ್ಲಿಯವರೆಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡುತ್ತಿದ್ದರು.
Car airbags: ನಿಮ್ಮ ಕಾರಿನಲ್ಲಿರುವ ಏರ್ʼಬ್ಯಾಗ್ ಅಸಲಿಯೋ, ನಕಲಿಯೋ ತಿಳಿಯುವುದೇಗೆ ಗೊತ್ತಾ..? ಈ ಸ್ಟೋರಿ ನೋಡಿ
ಈಗ ಚುನಾವಣಾ ಭಾಷಣಗಳಲ್ಲಿ ಪೆನ್ ಡ್ರೈವ್ ಬಗ್ಗೆಯೇ ಮಾತನಾಡುತ್ತಿದ್ದಾರೆ. ರಾಜಕೀಯ ಅಸ್ತ್ರವನ್ನಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಈ ಪ್ರಕರಣವನ್ನು ಬಿಜೆಪಿ ಬೆಂಬಲಿಸುವ ಅಥವಾ ಸಹಕಾರ ನೀಡುವ ಪ್ರಶ್ನೆಯೇ ಇಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಜ್ವಲ್ ಪ್ರಕರಣದ ಬಗ್ಗೆ ಅದೊಂದು ವೈಯಕ್ತಿಕ ಎಂದು ಹೇಳಿಲ್ಲ. ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕುರಿತು ಈ ಮೊದಲೇ ಪತ್ರ ಬರೆದಿದ್ದರು ಎನ್ನುವುದು ಶುದ್ಧ ಸುಳ್ಳು. ಅಂತಹ ಪತ್ರ ಇದುವರೆಗೂ ನನ್ನ ಕೈ ತಲುಪಿಲ್ಲ ಎಂದು ಸ್ಪಷ್ಟಪಡಿಸಿದರು.