ಬೆಂಗಳೂರು: ಕಾಂಗ್ರೆಸ್ ಇಂದಿನಿಂದ ಅಧಿಕೃತವಾಗಿ ಚುನಾವಣಾ ಪ್ರಚಾರದ ಅಖಾಡಕ್ಕೆ ಧುಮುಕಲಿದ್ದಾರೆ.ಕೋಲಾರದ ಕುರುಡುಮಲೆಯಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ,ಕಾಂಗ್ರೆಸ್ ಪ್ರಚಾರಕ್ಕೆ ರಣಕಹಳೆ ಮೊಳಗಿಸಲಿದ್ದಾರೆ.ಅಲ್ದೇ ಚುನಾವಣಾ ಅಖಾಡದಲ್ಲಿ ಮಾತಿನ ಸಮರ ಕೂಡ ಇಂದಿನಿಂದ ಜೋರಾಗಲಿದೆ.
ಯೆಸ್, ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ.ಮೊದಲ ಹಂತದಲ್ಲಿ 14 ಕ್ಷೇತ್ರದಲ್ಲಿ ಚುನಾವಣೆ ನಡೆಯಲಿದ್ದು,ಈ ಹಿನ್ನಲೆಯಲ್ಲಿ ನಾಳೆಯಿಂದಲೇ ಚುನಾವಣಾ ಪ್ರಚಾರಕ್ಕೆ ಧುಮುಕಲು ಕಾಂಗೆಸ್ ನಿರ್ಧಾರ ಮಾಡಿದೆ.ಕೋಲಾರದ ಕುರುಡುಮಲೆಯ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ,ಸಿಎಂ ಸಿದ್ದರಾಮಯ್ಯ,ಡಿಸಿಎಂ ಡಿ.ಕೆ.ಶಿವಕುಮಾರ್ ಅಧಿಕೃತವಾಗಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.ಸಚಿವರು,ಶಾಸಕರು ನಾಳೆ ವಿಶೇಷ ಪೂಜೆಯಲ್ಲಿ ಸಾಕ್ಷಿಯಾಗಲಿದ್ದಾರೆ.
ಚುನಾವಣಾ ಸಂದರ್ಭದಲ್ಲಿ ಕಾರ್ಯನಿರ್ವಹಿಸಲು ಆಶಾ ಕಾರ್ಯಕರ್ತೆಯರ ಬೇಡಿಕೆ!
ಇನ್ನು ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ್ ವಾದ್ರಾ ಕರೆಸಲು ತೀರ್ಮಾನ ಮಾಡಲಾಗಿದೆ.ಮೈಸೂರು,ಚಿಕ್ಕಬಳ್ಳಾಪುರ,ಕೋಲಾರ,ಚಿತ್ರದುರ್ಗ,ದಾವಣಗೆರೆಯಲ್ಲಿ ಸಮಾವೇಶ ಜೊತೆಗೆ ಬೃಹತ್ ರೋಡ್ ಶೋ ನಡೆಸಲು ಚಿಂತಿಸಲಾಗಿದೆ.ಇನ್ನು ಕೆಲ ಕ್ಷೇತ್ರಗಳಲ್ಲಿ ಸಿಎಂ ಸಿದ್ದರಾಮಯ್ಯ,ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತ್ಯೇಕ ಪ್ರಚಾರ ನಡೆಸಲು ತೀರ್ಮಾನ ಮಾಡಿದರೆ,ಇನ್ನು ಕೆಲ ಕ್ಷೇತ್ರಗಳಲ್ಲಿ ಜಂಟಿ ಪ್ರಚಾರ ಮಾಡಲು ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ.
ಇನ್ನು ವಿಧಾನಸಭಾ ಚುನಾವಣೆಯಲ್ಲಿ ಪಂಚ ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್,ಇದೀಗ ಲೋಕಸಭಾ ಚುನಾವಣೆಯಲ್ಲಿ ಇದೇ ಬ್ರಹ್ಮಾಸ್ತ್ರ ಹೂಡಲು ತೀರ್ಮಾನ ಮಾಡಿದೆ.ಐದು ಗ್ಯಾರಂಟಿ ಯೋಜನೆಯ ಜಾರಿ ಬಗ್ಗೆ ಮನೆ ಮನೆ ಪ್ರಚಾರ ಮಾಡಲು ಕಾಂಗ್ರೆಸ್ ನಿರ್ಧಾರ ಮಾಡಿದೆ.ಈ ಹಿನ್ನಲೆಯಲ್ಲಿ ಇಂದು ಮಹಿಳಾ ಘಟಕದ ಪದಾಧಿಕಾರಿಗಳ ಸಭೆ ನೆಡಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,ಗ್ಯಾರಂಟಿ ಯೋಜನೆ ಜಾರಿಯ ಬಗ್ಗೆ ಮನೆಮನೆಗೆ ಪ್ರಚಾರ ಮಾಡುವಂತೆ ಕರೆ ನೀಡಿದ್ದಾರೆ.ನಮ್ಮ ಗ್ಯಾರಂಟಿ ಟೀಕೆ ಮಾಡುವುದು ಬಿಟ್ಟು,ಬಿಜೆಪಿಯವರು ಬೇರೇನು ಮಾಡ್ತಿಲ್ಲ ಎಂದು ಸಚಿವ ಸಂತೋಷ್ ಲಾಡ್ ವ್ಯಂಗ್ಯ ಮಾಡಿದ್ದಾರೆ.
ಇನ್ನು ಎರಡನೇ ಹಂತದಲ್ಲಿ ನಡೆಯುವ 14 ಕ್ಷೇತ್ರಗಳ ಸಚಿವರ,ಶಾಸಕರ ಸಭೆಯನ್ನ ಸಿಎಂ,ಡಿಸಿಎಂ ಇಂದು ನಡೆಸಿದ್ದು,ಸಭೆಯಲ್ಲಿ ನಾಳೆಯಿಂದಲೇ ಚುನಾವಣಾ ಪ್ರಚಾರದ ಅಖಾಡಕ್ಕೆ ಧುಮುಕವಂತೆ ಎಲ್ಲ ನಾಯಕರಿಗೂ ಸೂಚನೆ ನೀಡಿದ್ದಾರೆ.ಒಟ್ಟಾರೆ,ನಾಮಪತ್ರ ಸಲ್ಲಿಕೆ ಬಳಿಕ ನಾಳೆಯಿಂದ ಲೋಕ ಅಖಾಡ ಮತ್ತಷ್ಟು ರಂಗೇರಲಿದ್ದು,ಮಾತಿನ ಸಮರ ಕೂಡ ಜೋರಾಗಲಿದೆ.