ಬೆಂಗಳೂರು: ಮುಸ್ಲಿಮರ ಋಣ ತೀರಿಸುವ ಕೆಲಸಕ್ಕೆ ಕಾಂಗ್ರೆಸ್ ಮುಂದಾಗಿದೆ. ಹೀಗಾಗಿ ಮತಬ್ಯಾಂಕ್, ಹಗರಣಗಳನ್ನು ಮರೆಮಾಚಲು ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R Ashok) ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ್ರೋಹಿ ಚಟುವಟಿಕೆ, ಪೊಲೀಸರ ಮೇಲೆ ಹಲ್ಲೆ ಮಾಡಿದ ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಮುಚ್ಚಿಹಾಕಿದೆ. ರೈತ ಹೋರಾಟ, ಕನ್ನಡ ಹೋರಾಟಗಳಿಗೆ ಇದನ್ನು ಹೋಲಿಸಬಾರದು. ಕುರ್ಚಿ ಅಲುಗಾಡುತ್ತಿರುವ ಸಮಯದಲ್ಲಿ ಮುಸ್ಲಿಮರು ನನ್ನ ಪರವಾಗಿದ್ದಾರೆ ಹಾಗೂ ಕಾಂಗ್ರೆಸ್ಗೆ ಮುಸ್ಲಿಮರ ವೋಟು ಬೇಕೆಂದು ಹೀಗೆ ಮಾಡಲಾಗಿದೆ. ಜೊತೆಗೆ ರೈತರ ವಿರುದ್ಧದ ಪ್ರಕರಣ ವಾಪಸ್ ಪಡೆಯಲು ಸಿ.ಟಿ.ರವಿ ಮನವಿ ಮಾಡಿದ್ದರೂ ಅದಕ್ಕೆ ಸರ್ಕಾರ ಸ್ಪಂದಿಸಿಲ್ಲ ಎಂದು ದೂರಿದರು
ಇಂದು ರಾಜ್ಯಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಭೇಟಿ
ಮುಸ್ಲಿಮರ ಋಣ ತೀರಿಸುವ ಕೆಲಸಕ್ಕೆ ಕಾಂಗ್ರೆಸ್ ಮುಂದಾಗಿದೆ. ಒಂದು ಕಡೆ ಸಿದ್ದರಾಮಯ್ಯ ಸೈಟು ವಾಪಸ್ ಕೊಟ್ಟರೆ, ಮತ್ತೊಂದೆಡೆ ಮಲ್ಲಿಕಾರ್ಜುನ ಖರ್ಗೆ ಸೈಟು ವಾಪಸ್ ನೀಡಿದ್ದಾರೆ. ಇನ್ನೊಂದೆಡೆ ಸರ್ಕಾರ ಪ್ರಕರಣ ವಾಪಸ್ ಪಡೆದಿದೆ. ಹಿಂದೂಗಳನ್ನು ಟಾರ್ಗೆಟ್ ಮಾಡುವ ಜೊತೆಗೆ ಕ್ರಿಮಿನಲ್ಗಳ ಪ್ರಕರಣ ವಾಪಸ್ ಪಡೆದಿದ್ದಾರೆ. ಕನ್ನಡ ಹೋರಾಟಗಾರ ನಾರಾಯಣಗೌಡರನ್ನು ಜೈಲಿಗೆ ಹಾಕಿದ್ದರು. ಆದರೆ ಭಯೋತ್ಪಾದಕರಿಗೆ ಮಾತ್ರ ಪರೋಕ್ಷವಾಗಿ ಬೆಂಬಲ ನೀಡಲಾಗುತ್ತಿದೆ. ಡಿಜೆ ಹಳ್ಳಿ ಗಲಭೆಯಲ್ಲಿ ಭಾಗಿಯಾದವರು ಕಾಂಗ್ರೆಸ್ನ ಪದಾಧಿಕಾರಿಗಳಾಗಿದ್ದಾರೆ. ರಾಮೇಶ್ವರಂ ಕೆಫೆಯ ಬಾಂಬ್ ಸ್ಪೋಟ ಪ್ರಕರಣವನ್ನು ಮುಚ್ಚಿಹಾಕುವ ಕೆಲಸ ಮಾಡಿದ್ದಾರೆ ಎಂದು ದೂರಿದರು.
ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ ಮಾಡಿದಾಗಲೂ ಇದೇ ರೀತಿ ಮಾಡಿದ್ದಾರೆ. ಇರ್ಯಾರೂ ಸ್ವಾತಂತ್ರ್ಯ ಹೋರಾಟಗಾರರಲ್ಲ. ಮುಡಾ, ವಾಲ್ಮೀಕಿ ನಿಗಮದ ಹಗರಣದಿಂದ ತಪ್ಪಿಸಿಕೊಳ್ಳಲು ಈ ತಂತ್ರ ಮಾಡಿರಬಹುದು. ಆದರೆ ಬಿಜೆಪಿಯಿಂದ ಈ ಎರಡೂ ಹಗರಣಗಳ ವಿರುದ್ಧ ಹೋರಾಟ ಮುಂದುವರಿಯಲಿದೆ. ಇದರ ಜೊತೆಗೆ ಕೇಂದ್ರ ಸರ್ಕಾರ ಅನುದಾನ ತಾರತಮ್ಯ ಮಾಡಿದೆ ಎಂಬ ಸುಳ್ಳು ಹಬ್ಬಿಸುತ್ತಿದ್ದಾರೆ. ಮೆಟ್ರೊ, ಜಲಜೀವನ್ ಮಿಷನ್, ಉಪನಗರ ರೈಲು ಮೊದಲಾದ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಹೆಚ್ಚು ಅನುದಾನ ನೀಡಿದ್ದಾರೆ. ಅಷ್ಟು ಆರೋಪ ಮಾಡುವುದಾದರೆ ಶ್ವೇತಪತ್ರ ಬಿಡುಗಡೆಗೊಳಿಸಿ ಎಷ್ಟು ಅನುದಾನ ನೀಡಲಾಗಿದೆ ತಿಳಿಸಲಿ ಎಂದು ಸವಾಲೊಡ್ಡಿದರು
ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ ಮಾಡಿದಾಗಲೂ ಇದೇ ರೀತಿ ಮಾಡಿದ್ದಾರೆ. ಇರ್ಯಾರೂ ಸ್ವಾತಂತ್ರ್ಯ ಹೋರಾಟಗಾರರಲ್ಲ. ಮುಡಾ, ವಾಲ್ಮೀಕಿ ನಿಗಮದ ಹಗರಣದಿಂದ ತಪ್ಪಿಸಿಕೊಳ್ಳಲು ಈ ತಂತ್ರ ಮಾಡಿರಬಹುದು. ಆದರೆ ಬಿಜೆಪಿಯಿಂದ ಈ ಎರಡೂ ಹಗರಣಗಳ ವಿರುದ್ಧ ಹೋರಾಟ ಮುಂದುವರಿಯಲಿದೆ. ಇದರ ಜೊತೆಗೆ ಕೇಂದ್ರ ಸರ್ಕಾರ ಅನುದಾನ ತಾರತಮ್ಯ ಮಾಡಿದೆ ಎಂಬ ಸುಳ್ಳು ಹಬ್ಬಿಸುತ್ತಿದ್ದಾರೆ. ಮೆಟ್ರೊ, ಜಲಜೀವನ್ ಮಿಷನ್, ಉಪನಗರ ರೈಲು ಮೊದಲಾದ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಹೆಚ್ಚು ಅನುದಾನ ನೀಡಿದ್ದಾರೆ. ಅಷ್ಟು ಆರೋಪ ಮಾಡುವುದಾದರೆ ಶ್ವೇತಪತ್ರ ಬಿಡುಗಡೆಗೊಳಿಸಿ ಎಷ್ಟು ಅನುದಾನ ನೀಡಲಾಗಿದೆ ತಿಳಿಸಲಿ ಎಂದು ಸವಾಲೊಡ್ಡಿದರು