ನವದೆಹಲಿ:- ಕಾಂಗ್ರೆಸ್ ಸುಳ್ಳಿನಿಂದ ಮಹಿಳೆಯರಿಗೆ ನೋವಾಗಿದೆ ಎಂದು ಸಂಸತ್ ನಲ್ಲಿ ರಾಗಾಗೆ ಮೋದಿ ಟಾಂಗ್ ಕೊಟ್ಟಿದ್ದಾರೆ.
ಕಾಲೇಜಿನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ..! ಆಮೇಲೇನಾಯ್ತು ಗೊತ್ತಾ!?
ರಾಷ್ಟ್ರಪತಿಗಳಿಗೆ ವಂದನಾ ನಿರ್ಣಯದ ಮೇಲೆ ಮಾತನಾಡಿದ ಪ್ರಧಾನಿ, ಜುಲೈ 1 ರಂದು ಜನರು 8,500 ರೂ. ಬಂದಿದ್ಯಾ ಇಲ್ವ ಅಂತಾ ಬ್ಯಾಂಕ್ ಖಾತೆ ಚೆಕ್ ಮಾಡುತ್ತಿದ್ದಾರೆ ಎಂದರು.
ಇದು ಕಾಂಗ್ರೆಸ್ನ ಸುಳ್ಳಿಗೆ ದೊಡ್ಡ ಉದಾಹರಣೆ. ಈ ಸುಳ್ಳಿನಿಂದ ಮಹಿಳೆಯರಿಗೆ ನೋವಾಗಿದೆ, ಅವರು ಪಾಠ ಕಲಿಸಲಿದ್ದಾರೆ. ಇವಿಎಂ, ಸಂವಿಧಾನ, ಮೀಸಲಾತಿ ಎಲ್ಲದರಲ್ಲೂ ಸುಳ್ಳು. ಇದಕ್ಕೂ ಮೊದಲು ಎಲ್ಐಸಿ, ಬಿಇಎಲ್, ರಫೇಲ್ ವಿಚಾರದಲ್ಲೂ ಸುಳ್ಳು ಹೇಳಿದರು. ಸೋಮವಾರ ಅಗ್ನಿವೀರ್ ವಿಚಾರದಲ್ಲಿ ಸದನದಲ್ಲಿ ಸುಳ್ಳು ಹೇಳಲಾಯಿತು. ಕನಿಷ್ಠ ಬೆಂಬಲ ಬೆಲೆ ನೀಡುತ್ತಿಲ್ಲ ಎಂದು ಹೇಳಿದ್ದಾರೆ. ಸದನದಲ್ಲಿ ಹೇಳುವ ಸುಳ್ಳು, ಅದರ ಗೌರವಕ್ಕೆ ಧಕ್ಕೆ ತಂದಿದೆ ಎಂದು ರಾಹುಲ್ ಗಾಂಧಿಯನ್ನು ಟಾರ್ಗೆಟ್ ಮಾಡಿದರು.
ತುರ್ತು ಪರಿಸ್ಥಿತಿಯ ಐವತ್ತನೇ ವರ್ಷ. ಅಧಿಕಾರಕ್ಕಾಗಿ ಸರ್ವಾಧಿಕಾರಿ ಶಾಸನ ಹೇರಲಾಯಿತು. ಕಾಂಗ್ರೆಸ್ ಕ್ರೂರತೆಯ ಎಲ್ಲೆ ಮೀರಿತ್ತು. ಸರ್ಕಾರ ಬೀಳಿಸುವುದು, ಮಾಧ್ಯಮ ನಿಯಂತ್ರಣ ಮೂಲಕ ಸಂವಿಧಾನದ ವಿರುದ್ಧ ಕಾಂಗ್ರೆಸ್ ನಡೆದುಕೊಂಡಿದೆ. ದಲಿತರು, ಹಿಂದುಳಿದ ಜನರಿಗೆ ಕಾಂಗ್ರೆಸ್ ಅನ್ಯಾಯ ಮಾಡಿದೆ. ಇದೇ ಕಾರಣಕ್ಕಾಗಿ ಅಂಬೇಡ್ಕರ್, ನೆಹರು ಸಂಪುಟದಿಂದ ರಾಜೀನಾಮೆ ನೀಡಿ ಹೊರ ಬಂದರು. ಅಂಬೇಡ್ಕರ್ ರಾಜೀನಾಮೆ ನೀಡುವ ವೇಳೆ ಕಾರಣ ನೀಡಿದ್ದರು. ಆ ಕಾರಣ ಕಾಂಗ್ರೆಸ್ ಚರಿತ್ರೆ ಹೇಳುತ್ತದೆ. ಎಸ್ಸಿ, ಎಸ್ಟಿ ಜನರ ಮೇಲಿನ ದೌರ್ಜನ್ಯ ನೋಡಲು ಸಾಧ್ಯವಾಗುತ್ತಿಲ್ಲ ಎಂದು ಅಂಬೇಡ್ಕರ್ ಹೇಳಿದ್ದರು. ಬಳಿಕ ನೆಹರು ಅಂಬೇಡ್ಕರ್ ರಾಜಕೀಯ ಜೀವನ ಮುಗಿಸಲು ಎಲ್ಲ ಪ್ರಯತ್ನ ಮಾಡಿದರು. ಷಡ್ಯಂತ್ರ ಮಾಡಿ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದರು. ಆ ಸೋಲಿಯ ವಿಜಯೋತ್ಸವ ಮಾಡಲಾಯಿತು, ಇದು ಒಂದು ಪತ್ರದಲ್ಲಿ ದಾಖಲಾಗಿದೆ ಎಂದು ಹೇಳಿದರು.