ಗದಗ: ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ, ಆದ್ದರಿಂದ ಕರ್ನಾಟಕವನ್ನೇ ಮಾರಾಟಕ್ಕಿಟ್ಟಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಗುಡುಗಿದ್ದಾರೆ. ನಗರದ ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಕೃತಜ್ಞತಾ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ, ಕಾಂಗ್ರೆಸ್ʼನಲ್ಲಿ ಕೇವಲ ಅಧಿಕಾರದ ದಾಹ ಬಿಟ್ಟರೆ ಬೇರೆ ಏನೂ ಬೇಕಿಲ್ಲ ಎಂದು ಕಿಡಿ ಕಾರಿದ್ದಾರೆ.
New Sim Card Rule: ಸಾರ್ವಜನಿಕರೇ ಗಮನಿಸಿ.. ಇಂದಿನಿಂದ ಸಿಮ್ ಕಾರ್ಡ್ ಸಂಬಂಧ ಹೊಸ ನಿಯಮ ಜಾರಿ!
ಕರ್ನಾಟಕದ ರಾಜಕಾರಣ ದೊಡ್ಡ ಪ್ರಮಾಣದಲ್ಲಿ ಬದಲಾವಣೆ ಆಗ್ತಿದೆ. ದಿನನಿತ್ಯ ಜನ ನೋಡ್ತಿದ್ದಾರೆ. ಯಾರು ಸಿಎಂ ಆಗಬೇಕು? ಯಾರು, ಎಷ್ಟು ಜನ ಡಿಸಿಎಂ ಆಗಬೇಕು? ಯಾವ ಜಾತಿಯವರು ಡಿಸಿಎಂ ಆಗಬೇಕು? ಎಂಬ ಕಚ್ಚಾಟ ಕಾಂಗ್ರೆಸ್ನಲ್ಲಿ ನಡೆಯುತ್ತಿದೆ. ಅಭಿವೃದ್ಧಿ ಶೂನ್ಯ ಅಂತ ಕಾಂಗ್ರೆಸ್ ಪಕ್ಷದ ಶಾಸಕರೇ ಹೇಳ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.