ಹುಬ್ಬಳ್ಳಿ: ಸೋಲಿನ ಭೀತಿಯಿಂದ ಸಿದ್ದರಾಮಯ್ಯ ರಾಜಕೀಯ ನಿವೃತ್ತಿಯ ಮಾತನಾಡುತ್ತಿದ್ದಾರೆ. ಅಮಿತ್ ಶಾ ಸತ್ಯ ಹೇಳಿದ್ರೆ ರಾಜಕೀಯ ನಿವೃತ್ತಿ ಪಡೆಯೋದಾಗಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು. ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿದ್ಧರಾಮಯ್ಯ ಅವರಿಗೆ ಸೋಲಿನಭೀತಿ ಎದುರಾಗಿದೆ. ಹೀಗಾಗಿ ಈ ರೀತಿ ಮಾತನಾಡುತ್ತಿದ್ದಾರೆ.
ಬರ ಪರಿಹಾರದ ವಿಚಾರದಲ್ಲಿ ವಿನಾಕಾರಣ ಕಾಂಗ್ರೆಸ್ ಆರೋಪ ಮಾಡ್ತಿದೆ. ಕಾಂಗ್ರೆಸ್ ಪಕ್ಷ ಸದಾಕಾಲ ಸುಳ್ಳು ಹೇಳುತ್ತಲೇ ಬಂದಿದೆ ಎಂದರು. “ಎನ್ ಡಿ ಆರ್ ಎಫ್ ನಲ್ಲಿ 75 ಪರ್ಸೆಂಟ್ ದುಡ್ಡು ಕೊಡುತ್ತೇವೆ. ಇವರು ಹೇಗೆ ಖರ್ಚು ಮಾಡ್ತಾರೋ ಹಾಗೆ ದುಡ್ಡು ಕೊಡ್ತಾ ಹೋಗ್ತಿವಿ. ಹಿಂದೆ ಯಡಿಯೂರಪ್ಪ ಸರ್ಕಾರವಿದ್ದಾಗಲು ಮನೆ ಬಿದ್ದವರಿಗೆ 5 ಲಕ್ಷ, ಎಕೆರೆಗೆ 5 ಸಾವಿರ ಪರಿಹಾರ ನೀಡಿದ್ದೆವು.
ಒಂದೇ ಸೀರೆಯನ್ನು ಪದೇ ಪದೇ ಧರಿಸುತ್ತಿದ್ದೀರಾ!?, ಹುಷಾರ್ ಕ್ಯಾನ್ಸರ್ ಬರಬಹುದು!
ಆದ್ರೆ ಕಾಂಗ್ರೆಸ್ ಸರ್ಕಾರ ಯಾಕೆ ಬರಪರಿಹಾರ ವಿಚಾರದಲ್ಲಿ ಸುಳ್ಳು ಹೇಳುತ್ತಿದೆ..? ನೀತಿ ಸಂಹಿತೆ ಮುಗಿದ ನಂತರ ಎಲ್ಲ ವಿಚಾರದ ಕುರಿತು ಸ್ಪಷ್ಟಪಡಿಸುತ್ತೇವೆ” ಎಂದು ಅವರು ಹೇಳಿದರು. “ಮೋದಿಯವರನ್ನು ದೇಶದ ಜನ ಈಗಾಗಲೇ ಸ್ವೀಕಾರ ಮಾಡಿದ್ದಾರೆ. ಆದ್ರೆ ಕಾಂಗ್ರೆಸ್ ನವರು ಕ್ಷುಲ್ಲಕವಾಗಿ ಮಾತನಾಡುತ್ತಿದ್ದಾರೆ. ಜನ ಕಾಂಗ್ರೆಸ್ ನವರನ್ನ ತಿರಸ್ಕಾರ ಮಾಡೋದು ಖಚಿತ” ಎಂದ ಅವರು, “ಸುಮಲತಾ ಬಿಜೆಪಿ ಸೇರ್ಪಡೆ ಒಳ್ಳೆಯ ವಿಚಾರ. ಅವರಿಗೆ ಅಭಿನಂದನೆ ಹೇಳ್ತೇನೆ” ಎಂದು ಹೇಳಿದರು.