ಹಾವೇರಿ: ಯಸೀರ್ ಖಾನ್ ಪಠಾಣ್ ರೌಡಿಶೀಟರ್ ಎಂದು ಅವರ ಪಕ್ಷದವರೇ ಮಾತಾಡಿದ್ದಾರೆ. ಅವರ ಪಕ್ಷದವರೇ ಸ್ಪಷ್ಟೀಕರಣ ಕೊಡಲಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶಿಗ್ಗಾಂವಿ ಉಪಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗುಪಡೆಯುತ್ತಿದೆ. ಶಿಗ್ಗಾಂವಿಯಲ್ಲಿ ಲಿಂಗಾಯತ ಪಂಚಮಸಾಲಿ ಮುಖಂಡರ ಮನೆಮನೆಗೆ ಭೇಟಿ ನೀಡಿ ಬಸವರಾಜ ಬೊಮ್ಮಾಯಿ ಮತಯಾಚನೆ ಮಾಡಿದ್ದಾರೆ. ಪುತ್ರ ಭರತ್ ಬೊಮ್ಮಾಯಿ ಬೆಂಬಲಿಸುವಂತೆ ಮನವಿ ಮಾಡುತ್ತಿದ್ದಾರೆ.
Stop Eating Rice: ಒಂದು ತಿಂಗಳು ಅನ್ನ ಸೇವಿಸದಿದ್ದರೆ ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ..?
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವ ಗ್ಯಾರಂಟಿನೂ ಕೈ ಹಿಡಿದಿಲ್ಲ, ಏನೂ ಹಿಡಿದಿಲ್ಲ. ನಾನು ಹೆಚ್ಚಿನ ಸಮಯ ಹಾವೇರಿ ಗದಗ ಲೋಕಸಭಾ ಕ್ಷೇತ್ರದಲ್ಲಿ ಇದ್ದ ಕಾರಣ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಶಿಗ್ಗಾಂವಿ ಕ್ಷೇತ್ರದಲ್ಲಿ ಸ್ವಲ್ಪ ಹೆಚ್ಚು ಕಡಿಮೆ ಆಗಿದೆ. ಈ ಎಲ್ಲಾ ವಿಚಾರ ನಮ್ಮ ಕಾರ್ಯಕರ್ತರಿಗೆ ಮನದಟ್ಟಾಗಿದೆ. ಕ್ಷೇತ್ರದಲ್ಲಿ 2023ರ ವಿಧಾನಸಭಾ ಚುನಾವಣೆ ವಾತಾವರಣ ಇದೆ. ಕಾಂಗ್ರೆಸ್ನವರು ಕನಸು ಕಾಣುತ್ತಿದ್ದಾರೆ. ಅವರ ಕನಸು ನನಸಾಗಲ್ಲ ಎಂದರು.