ಬೆಂಗಳೂರು: ಹಿಂದೆ ವೀರೇಂದ್ರ ಪಾಟೀಲ್ ಅವರಿಂದ ಅಧಿಕಾರ ಕಿತ್ತುಕೊಂಡ ಕಾಂಗ್ರೆಸ್ ನಂತರ ಬಿ.ಎಸ್.ಯಡಿಯೂರಪ್ಪ ಅವರನ್ನು ಜೈಲಿಗೆ ಕಳುಹಿಸಿ ಲಿಂಗಾಯಿತರಿಗೆ ಅವಮಾನ ಮಾಡಿತ್ತು. ಈಗ ಒಕ್ಕಲಿಗರನ್ನು ಗುರಿಯಾಗಿಸಿಧಿಕೊಂಡು ಒಂದು ಲಕ್ಷ ಪೆನ್ಡ್ರೈನ್ ಸಿದ್ಧಪಡಿಸಿ ಹಂಚಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ”ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಲು ಕಾಂಗ್ರೆಸ್ ಕಾರಣ. ಕೇಂದ್ರ ಸರಕಾರದ ವಿರುದ್ಧ ಆರೋಪ ಮಾಡಲೆಂದೇ ಸುರ್ಜೇವಾಲಾ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಹೀಗೆ ಪ್ಲ್ಯಾನ್ ಮಾಡಿದ್ದಾರೆ. ಚಿತ್ರಕಥೆಯನ್ನು ಸುರ್ಜೇವಾಲಾ ಬರೆದಿದ್ದು, ಸಿದ್ದರಾಮಯ್ಯ ನಿರ್ದೇಶನ ಹಾಗೂ ಡಿ.ಕೆ.ಶಿವಕುಮಾರ್ ನಿರ್ಮಾಣ ಮಾಡಿದ್ದಾರೆ,” ಎಂದು ದೂರಿದರು.
ರೈತರೇ ಗಮನಿಸಿ.. ಸಪೋಟ ಹಣ್ಣಿನ ಕೃಷಿಯಿಂದ ಗಳಿಸಬಹುದು ಲಕ್ಷಗಟ್ಟಲೇ ಆದಾಯ..!
”ಇದೆಲ್ಲಾ ದೊಡ್ಡ ಷಡ್ಯಂತ್ರವಾಗಿದ್ದು, ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಪ್ರಜ್ವಲ್ ರಾಜ್ಯದಲ್ಲಿ ಬಂಧನವಾಗುವುದು ಕಾಂಗ್ರೆಸ್ಗೆ ಬೇಕಿರಲಿಲ್ಲ. ದೇಶ ತೊರೆಯಲು ಅವಕಾಶ ನೀಡಿ ಬಳಿಕ ವಿದೇಶದಲ್ಲಿ ಬಂಧಿಸಿದರೆ ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸಿಗೆ ಧಕ್ಕೆ ತರಬೇಕೆಂಬ ಉದ್ದೇಶದಿಂದ ಮುಖ್ಯಮಂತ್ರಿ ಕೇಂದ್ರಕ್ಕೆ ಪತ್ರ ಬರೆದರೆ, ರಾಹುಲ್ ಗಾಂಧಿ ಅವರು ಸಿಎಂಗೆ ಪತ್ರ ಬರೆಯುತ್ತಾರೆ. ಇದೆಲ್ಲವೂ ಡ್ರಾಮಾ,” ಎಂದು ಕಿಡಿಕಾರಿದರು.