ಬೆಂಗಳೂರು: ”ವಿದೇಶಾಂಗ ಇಲಾಖೆ ಪಾಸ್ಪೋರ್ಟ್ ರದ್ದು ಮಾಡಿದರೆ ಪ್ರಜ್ವಲ್ ವಿದೇಶದಲ್ಲಿ ಇರಲು ಆಗಲ್ಲ. ವಾಪಸ್ ಬರಲೇಬೇಕಾಗುತ್ತೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ”ವಿದೇಶಾಂಗ ಇಲಾಖೆ ಪಾಸ್ಪೋರ್ಟ್ ರದ್ದು ಮಾಡಿದರೆ ಪ್ರಜ್ವಲ್ ವಿದೇಶದಲ್ಲಿ ಇರಲು ಆಗಲ್ಲ. ವಾಪಸ್ ಬರಲೇಬೇಕಾಗುತ್ತೆ. ಆದ್ರೆ, ನಮಗೆ ಬಹಳ ಕೆಲಸ ಇದ್ದು, ಬರ ನಿರ್ವಹಣೆ, ಆಡಳಿತದ ಜವಾಬ್ದಾರಿ ನಮ್ಮ ಮೇಲಿದೆ.
ಕಾಂಗ್ರೆಸ್ಗೆ ಬೇರೆ ಕೆಲಸ ಇದೆ ಎಂದು ಹೆಚ್ಡಿಕೆ ಯಾವ ಉದ್ದೇಶದಿಂದ ಹೇಳಿದ್ದಾರೋ ಗೊತ್ತಿಲ್ಲ” ಎಂದು ತಿಳಿಸಿದರು. ”ಬರ ಪರಿಹಾರ ಕೊಟ್ಟಿದ್ದು, ಕೋರ್ಟ್ ಸೂಚನೆ ನಂತರ ಇನ್ನೂ ಬರ ಪರಿಹಾರ ಕೇಂದ್ರದಿಂದ ಬರಬೇಕು. ಆ ಸಹಕಾರವನ್ನು ಅವರು ಮೊದಲು ಕೊಡಲಿ. ನಮ್ಮ ಸಾಧನೆ, ಗ್ಯಾರಂಟಿ ನೋಡಿ ಬಿಜೆಪಿಗೆ ಹೊಟ್ಟೆ ಉರಿ” ಎಂದು ಇದೇ ವೇಳೆ ಟೀಕಿಸಿದರು.
![Demo](https://ainlivenews.com/wp-content/uploads/2023/12/spoorthi-1.jpg)
Railway Jobs: ರೈಲ್ವೆ ಇಲಾಖೆಯಲ್ಲಿ ಬಂಪರ್ ಉದ್ಯೋಗಾವಕಾಶ..! ತಿಂಗಳಿಗೆ 56,000 ಸಂಬಳ
ಲೋಕಸಭೆಯಲ್ಲಿ 20 ಸ್ಥಾನ ಗೆಲ್ಲುವ ಹಗಲು ಕನಸು ಕಾಣ್ತಿದೆ ಕಾಂಗ್ರೆಸ್ ಎಂಬ ಬಿಜೆಪಿ ಟೀಕೆ ವಿಚಾರವಾಗಿ ಪ್ರತಿಕ್ರಿಯಿಸಿ, ”ನಾವು ಹಗಲು ಕನಸು ಕಂಡ್ರೆ ಅವರೇನು ರಾತ್ರಿ ಕನಸು ಕಾಣ್ತಿದ್ದಾರಾ? ಕನಸು ಯಾವಾಗ ಕಂಡ್ರೂ ಕನಸೇ ಆಗಿದೆ. ಹಗಲಲ್ಲೂ, ರಾತ್ರಿಯಲ್ಲೂ ಕಂಡ್ರೂ ಅದು ಕನಸೇ ಆಗಿದೆ. ಸಿಎಂ ಎಷ್ಟು ಸ್ಥಾನ ಕಾಂಗ್ರೆಸ್ ಗೆಲ್ಲುತ್ತದೆ ಅಂತ ಹೇಳಿದ್ದಾರೋ ಅಷ್ಟು ಗೆಲ್ತೇವೆ. ನಾನು ಬೇರೆ ಹೇಳುವ ಅಗತ್ಯ ಇಲ್ಲ” ಎಂದರು.
![](https://ainlivenews.com/wp-content/uploads/2024/01/Ad-Banner-copy-scaled.jpg)