ಬಳ್ಳಾರಿ : ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಹಿನ್ನಲೆ ದುರ್ಗಮ್ಮ ದೇಗುಲದಲ್ಲಿ ಕಾಂಗ್ರೆಸ್ ನಾಯಕರು ವಿಶೇಷ ಪೂಜೆ ಸಲ್ಲಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಎಂಟು ಜೆಸಿಬಿ ಮೂಲಕ ಹೂವಿನ ಮಳೆ ಸುರಿಸಿದರು. ಪಟಾಕಿ ಸಿಡಿಸಿ, ಪೇಪರ್ ಬ್ಲಾಸ್ಟ್ ಹಾರಿಸಿ ಅದ್ದೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದ್ದು,
ದುರ್ಗಮ್ಮ ದೇಗುಲದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ಆರಂಭವಾಗಲಿದೆ. ಅಭ್ಯರ್ಥಿ ತುಕಾರಾಂ ಜೊತೆಗೆ ಸಚಿವರಾದ ನಾಗೇಂದ್ರ, ಜಮೀರ್, ಶಾಸಕರಾದ ಭರತ್ ರೆಡ್ಡಿ, ಗಣೇಶ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು ಉಪಸ್ಥಿತರಿದ್ದರು.
![Demo](https://ainlivenews.com/wp-content/uploads/2023/12/spoorthi-1.jpg)
![](https://ainlivenews.com/wp-content/uploads/2024/01/Ad-Banner-copy-scaled.jpg)