ರಾಮನಗರ: ಬುಧವಾರ ತೋಟದ ಮನೆಯ ಹೊಸತೊಡಕು ಊಟಕ್ಕೆ ಚುನಾವಣಾಧಿಕಾರಿಗಳು ಬ್ರೇಕ್ ಹಾಕಿದ ವಿಚಾರದ ಕುರಿತು ಮಾತನಾಡಿದ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾಮಾನ್ಯವಾಗಿ ಯುಗಾದಿ (Ugadi) ಹಬ್ಬದಲ್ಲಿ ಹೊಸತೊಡಕು ಊಟ ಹಾಕುತ್ತೇವೆ. ನಮ್ಮ ತೋಟದ ಮನೆಯ 100 ರಿಂದ 150 ಮಂದಿ ಕೆಲಸಗಾರರಿಗೆ ಊಟದ ವ್ಯವಸ್ಥೆ ಮಾಡಿದ್ದೆವು.
ಅಲ್ಲದೇ ಬಿಜೆಪಿ-ಜೆಡಿಎಸ್ ಮುಖಂಡರು ಸಹ ಊಟಕ್ಕೆ ಸೇರುವ ತೀರ್ಮಾನ ಮಾಡಿದ್ದೆವು. ಇಲ್ಲಿ ಯಾವುದೇ ಪಾರ್ಟಿ ಕಾರ್ಯಕ್ರಮ ಮಾಡುತ್ತಿರಲಿಲ್ಲ. ಸಾರ್ವಜನಿಕ ಸಮಾರಂಭ ಮಾಡುತ್ತಿರಲಿಲ್ಲ. ಕಾಂಗ್ರೆಸ್ನವರ ರೀತಿಯ ಕುಕ್ಕರ್, ಸೀರೆ ಹಂಚುವ ಕಾರ್ಯಕ್ರಮ ನಮ್ಮದಲ್ಲ ಎಂದು ಹರಿಹಾಯ್ದರು. ಕಾಂಗ್ರೆಸ್ (Congress) ಸೋಲುವ ಆತಂಕದಲ್ಲಿ ಏನೇನೋ ಆರೋಪ ಮಾಡುತ್ತಿದೆ.
![Demo](https://ainlivenews.com/wp-content/uploads/2023/12/spoorthi-1.jpg)
Old Pension Scheme: ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್: ಹಳೆಯ ಪಿಂಚಣಿಗೆ ಮಹತ್ವದ ಆದೇಶ
ಅವರ ದೂರಿಗೆ ಮಣೆಹಾಕಿ ಅಧಿಕಾರಿಗಳು ತೋಟದ ಮನೆಗೆ ಬಂದು ಪರಿಶೀಲನೆ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಕುಕ್ಕರ್, ಸೀರೆ ಹಂಚುವ ಬಗ್ಗೆ ಯಾಕೆ ಚುನಾವಣಾ ಆಯೋಗ ಕ್ರಮವಹಿಸುತ್ತಿಲ್ಲ. ಚುನಾವಣಾಧಿ ಕಾರಿಗಳು ಅವರ ಕೈಗೊಂಬೆ ಆಗಿರೋದು ಸ್ಪಷ್ಟವಾಗಿದೆ. ರಾಮನಗರದಲ್ಲಿ ಸುಮಾರು 3,700 ಸೀರೆ ಜಪ್ತಿ ಮಾಡಿದ್ದು ನಮ್ಮ ಕಾರ್ಯಕರ್ತರು. ಆಗ ಚುನಾವಣಾ ಆಯೋಗ, ಅಧಿಕಾರಿಗಳು ಏನು ಮಾಡುತ್ತಿದ್ದರು ಎಂದು ಚುನಾವಣಾಧಿಕಾರಿಗಳ ವಿರುದ್ಧ ವಾಗ್ದಾಳಿ ನಡೆಸಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)