ಕಂಪ್ಲಿ: ಕಂಪ್ಲಿ ತಾಲೂಕಿನ ಹಂಪಿ ದೇವನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾವು ಶುಕ್ರವಾರ ಗ್ರಾಮೀಣ ಭಾಗದ ಹಂಪೆ ದೇವನಹಳ್ಳಿ ಗ್ರಾಮಕ್ಕೆ ಆಗಮಿಸಿದಾಗ ಅದ್ದೂರಿಯಾಗಿ ಸ್ವಾಗತಿಸಲಾಯಿತು. ವಿದ್ಯಾರ್ಥಿಗಳು,ವಿವಿಧ ಇಲಾಖೆಗಳ ಅಧಿಕಾರಿಗಳು, ದಲಿತ ಸಂಘಟನೆಯ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ನೂರಾರು ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಜಾಥಾವನ್ನು ಬರಮಾಡಿಕೊಂಡರು.
ವರ್ಷಗಳಾದ ಹಿನ್ನೆಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ರಾಜ್ಯಾದ್ಯಂತ ಅದ್ದೂರಿಯಾಗಿ ಸಂಚರಿಸುತ್ತಿದೆ. ಹಂಪೆ ದೇವನಹಳ್ಳಿ ಗ್ರಾಮದಲ್ಲಿ ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಸ್ಪಾರ್ಚನೆ ಮಾಡುವ ಮೂಲಕ ಸಂಭ್ರಮದ ಕಾರ್ಯಕ್ರಮವನ್ನು ನಡೆಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕವಿತಾ ರವರು ಮಾತನಾಡಿ ಸಂವಿಧಾನದ ಮಹತ್ವ ಮತ್ತು ಅದರ ಆಶಯಗಳನ್ನು ದೇಶದ ಪ್ರತಿಯೊಬ್ಬ ಪ್ರಜೆಗೂ ಅರಿವು ಮೂಡಿಸುವ ನಿಟ್ಟಿನಲ್ಲಿ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ. ನಾಗರಿಕರು ಸಂವಿಧಾನದ ಮಹತ್ವವನ್ನು ಅರಿತು,ಅದರ ಆಶಯದಂತೆ ನಡೆದುಕೊಂಡರೆ ದೇಶವು ಅಭಿವೃದ್ಧಿಯ ಪಥದಲ್ಲಿ ಸಾಗುತ್ತದೆ. ಜತೆಗೆ ಸಮಾಜದಲ್ಲಿ ಶಾಂತಿ,ನೆಮ್ಮದಿ ನೆಲೆಸುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು. ಉಪಾಧ್ಯಕ್ಷರು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆಗಳು ಆಶಾ ಕಾರ್ಯಕರ್ತರು ಹಾಗೂ ಮತ್ತಿತ್ತರು ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು