ಹುಬ್ಬಳ್ಳಿ : ಇಂದು ಅಣ್ಣಿಗೇರಿ ತಾಲೂಕಿನ ಶಿಶುವಿನಹಳ್ಳಿ, ಅಣ್ಣಿಗೇರಿ, ಸಾಸಿವಿಹಳ್ಳಿ, ಹಳ್ಳಿಕೇರಿ, ಇಬ್ರಾಹಿಮಪುರ, ನಾವಳ್ಳಿ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆ ನಡೆಯಿತು.
ಗ್ರಾಮಸ್ಥರು ಜಾಗೃತಿ ಜಾಥಾ ವಾಹನಕ್ಕೆ ಆರತಿ ಬೆಳಗಿಸುವುದರ ಮೂಲಕ ಸ್ವಾಗತ ಕೋರಿದರು. ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಂಗ ಅಧಿಕಾರಿ ಮಲ್ಲಿಕಾರ್ಜುನ ಗುಮ್ಮಗೋಳ ಅವರು ಸಂವಿಧಾನದ ಮಹತ್ವ, ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತು ಉಪನ್ಯಾಸ ನೀಡಿದರು. ಶಾಲಾ ವಿದ್ಯಾರ್ಥಿಗಳಿಗೆ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆ ಹಾಗೂ ಚರ್ಚಾ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನಗಳನ್ನು ವಿತರಣೆಯನ್ನು ಮಾಡಲಾಯಿತು. ಕಿತ್ತೂರು ರಾಣಿ ಚೆನ್ನಮ್ಮನ ಕುರಿತಾದ ಕಿರು ನಾಟಕ ನೋಡುಗರನ್ನು ಮಂತ್ರಮುಗ್ಧರನ್ನಾಗಿಸಿತು. ಅಲ್ಲದೇ ಕೋಲು ಕೋಲಣ್ಣ ಕೋಲು ಕೋಲೇ ಎಂಬ ಹಾಡಿಗೆ ಮಕ್ಕಳು ಕೋಲಾಟವಾಡಿದರು.
ರಾಮ ಕಾಲ್ಪನಿಕ ಎಂದು ಕರೆದವರು ಈಗ ಜೈ ಸಿಯಾ ರಾಮ್ ಘೋಷಣೆ ಕೂಗುತ್ತಿದ್ದಾರೆ: ಮೋದಿ ಕಿಡಿ!
ವಿದ್ಯಾರ್ಥಿಗಳ ಆಕರ್ಷಕ ಕೋಲಾಟ, ಲೇಜಿಮ್, ನೃತ್ಯ, ಹಾಡುಗಳು ಮೆರವಣಿಗೆಗೆ ಮತ್ತಷ್ಟು ಮೆರುಗು ನೀಡಿದವು. ಮಹಿಳೆಯರ ಡೊಳ್ಳು ಕುಣಿತ, ಮುತ್ತೈದೆಯರ ಕುಂಭಮೇಳ, ಸೇವಾದಳ, ಶಾಲಾ ವಿದ್ಯಾರ್ಥಿಗಳು, ಗ್ರಾಮಸ್ಥರು ಅದ್ಧೂರಿಯಾಗಿ ಮೆರವಣಿಗೆ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಥಾ ಸಂಚರಿಸಿತು. ನಮ್ಮ ಸಂವಿಧಾನ ನಮ್ಮ ಹೆಮ್ಮೆ, ನಮ್ಮ ಸಂವಿಧಾನ ನಮ್ಮ ಪ್ರತಿಷ್ಠೆ, ಜೈ ಭೀಮ್, ಅಂಬೇಡ್ಕರ್, ಬಸವಣ್ಣನವರ ಕುರಿತಾದ ಜಯಘೋಷಗಳನ್ನು ಸಾರ್ವಜನಿಕರು ಕೂಗಿದರು. ಎತ್ತಿನ ಬಂಡಿ ಹಾಗೂ ಟ್ರಾö್ಯಕ್ಟರ್ ಮೂಲಕ ಡಾ.ಬಿ.ಆರ್.ಅಂಬೇಡ್ಕರ್, ಬಸವಣ್ಣನವರ ಅವರ ಭಾವಚಿತ್ರದ ಮೆರವಣಿಗೆಯು ಎಲ್ಲರ ಗಮನ ಸೆಳೆಯಿತು. ರಸ್ತೆಯ ಬದಿಗಳಲ್ಲಿ ಚಿತ್ತಾಕರ್ಷಕವಾಗಿ ರಂಗೋಲಿಗಳನ್ನು ಬಿಡಿಸಲಾಗಿತ್ತು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿಯರಾದ ಕಫೀಲಾ ಏಲೂವಗಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸಿಬ್ಬಂದಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಮುಖಂಡರು, ಶಿಶು ಅಭಿವೃದ್ದಿ ಅಧಿಕಾರಿಗಳು, ಹಾಗೂ ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು, ಗ್ರಾಮಸ್ಥರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.