ರಾಯ್ಪುರ: ಅಯೋಧ್ಯೆ ರಾಮಮಂದಿರದ (Ayodhya RamaMandir) ವಿಚಾರದಲ್ಲಿ ಕ್ರೆಡಿಟ್ ಪಾಲಿಟಿಕ್ಸ್ ಶುರುವಾಗಿದೆ. ಮೊನ್ನೆಯಷ್ಟೇ ಕಮಲ್ನಾಥ್ ಮಾತಾಡ್ತಾ, ರಾಜೀವ್ ಗಾಂಧಿಗೂ ಇದರ ಕ್ರೆಡಿಟ್ ಕೊಡಬೇಕು ಎಂದು ಆಗ್ರಹಿಸಿದ್ದರು. ಇದಕ್ಕೆ ನಾವೇ ಕ್ರೆಡಿಟ್ ತಗೋತಿಲ್ಲ ಅಂತಾ ಅಮಿತ್ ಶಾ (AmitShah) ಹೇಳಿದ್ದರು. ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿಯವರು ನನ್ನಿಂದಾಗಿಯೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಸಾಧ್ಯವಾಗಿದೆ ಎಂದು ಹೇಳಿದ್ದಾರೆ. ಛತ್ತೀಸ್ಘಡದ ಬಿಶ್ರಮ್ಪುರ ರ್ಯಾಲಿಯಲ್ಲಿ ಮೋದಿ ಈ ಮಾತನ್ನು ಹೇಳಿದ್ದಾರೆ.
ಮಂಡಿ ನೋವು, ಸಂದಿ ನೋವುಗಳಿಂದ ಜೀವನದಲ್ಲಿ ಬೇಸತ್ತಿದ್ದರೆ ಇದೊಂದು ಚಿಕಿತ್ಸೆ ಪ್ರಯತ್ನ ಮಾಡಿ: ಉಚಿತ ಸಲಹೆ
ವಾಜಪೇಯಿ ಅವರ ಕಾಲದಲ್ಲಿ ಛತ್ತೀಸ್ ಗಢದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿತ್ತು. ಈಗ ಮತ್ತೆ ಇಲ್ಲಿನ ಜನ ಬಿಜೆಪಿ ಸರ್ಕಾರ (BJP Govt) ಬರಬೇಕು ಎಂದು ಹೇಳುತ್ತಿದ್ದಾರೆ ಅಂತ ಮೋದಿ ಹೇಳಿದರು. ಸ್ವಾತಂತ್ರ್ಯ ಬಂದಾಗಿನಿಂದ ಆದಿವಾಸಿಗಳು ಕಾಂಗ್ರೆಸ್ ಕಣ್ಣಿಗೆ ಬಿದ್ದಿರಲಿಲ್ಲ. ನಿಮ್ಮ ಮತ್ತು ನಿಮ್ಮ ಮಕ್ಕಳ ಬಗ್ಗೆ ಅವರು ತಲೆಕೆಡಿಸಿಕೊಂಡಿಲ್ಲ. ಆದರೆ ಆದಿವಾಸಿಗಳ ಅಭಿವೃದ್ಧಿಗೆ ಬಿಜೆಪಿ ಹೆಚ್ಚಿನ ಆದ್ಯತೆ ನೀಡುತ್ತದೆ. ಆದಿವಾಸಿ ಸಮುದಾಯದ ಮಹಿಳೆಯೊಬ್ಬರು ರಾಷ್ಟ್ರಪತಿಯಾಗಬಹುದೆಂದು ನೀವು ಎಂದಾದರೂ ಊಹಿಸಿದ್ದಿರೇ ಎಂದು ಇದೇ ವೇಳೆ ಪ್ರಧಾನಿ (PM Narendra Modi) ಸಾರ್ವಜನಿಕರಲ್ಲಿ ಕೇಳಿದರು.