ಅಯೋಧ್ಯೆ: ಪ್ರತಿನಿತ್ಯ ಸಾವಿರಾರು ಭಕ್ತರನ್ನು ಆಕರ್ಷಿಸುವ ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಇದೀಗ ಟಾಟಾ ಸನ್ಸ್ ಸಂಸ್ಥೆಯು 650 ಕೋಟಿ ವೆಚ್ಚದಲ್ಲಿ ದೇಗುಲಗಳ ಮ್ಯೂಸಿಯಂ ಅನ್ನು ಸ್ಥಾಪಿಸಲು ಮುಂದಾಗಿದೆ. ಉತ್ತರ ಪ್ರದೇಶ ಸಚಿವ ಸಂಪುಟ ಟಾಟಾ ಗ್ರೂಪ್ನ ಮಾತೃ ಸಂಸ್ಥೆಯಾಗಿರುವ ಟಾಟಾ ಸನ್ಸ್ನ ಈ ಯೋಜನೆಗೆ ಹಸಿರು ನಿಶಾನೆ ತೋರಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ನಂತರ ಯುಪಿ ಪ್ರವಾಸೋದ್ಯಮ ಸಚಿವ ಜೈವಿರ್ ಸಿಂಗ್ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ಟಾಟಾ ಸನ್ಸ್ ತನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯ ಅಡಿಯಲ್ಲಿ 650 ಕೋಟಿ ರೂಪಾಯಿ ವೆಚ್ಚದಲ್ಲಿ ವಸ್ತುಸಂಗ್ರಹಾಲಯವನ್ನು,
Orange peel tea: ಕಿತ್ತಳೆ ಸಿಪ್ಪೆಯ ಚಹಾ ಮಾಡುವ ವಿಧಾನ ಮತ್ತು ಅದರ ಪ್ರಯೋಜನಗಳು ಇಲ್ಲಿದೆ..!
ನಿರ್ಮಿಸಲು ಕೇಂದ್ರ ಸರ್ಕಾರದ ಮೂಲಕ ಯೋಜನೆಯನ್ನು ಪ್ರಸ್ತಾಪಿಸಿದೆ ಎಂದು ಹೇಳಿದರು. ಈ ಅತ್ಯಾಧುನಿಕ ವಸ್ತುಸಂಗ್ರಹಾಲಯವು ಅಂತಾರಾಷ್ಟ್ರೀಯ ಗುಣಮಟ್ಟವನ್ನು ಪೂರೈಸುತ್ತದೆ. ಭಾರತದ ಪ್ರಸಿದ್ಧ ದೇವಾಲಯಗಳ ಇತಿಹಾಸ ಮತ್ತು ವಾಸ್ತುಶಿಲ್ಪವನ್ನು ಪ್ರದರ್ಶಿಸುತ್ತದೆ ಎಂದರು.