ಮಂಡ್ಯ:- ಮೈಸೂರಿನ ಕಲುಷಿತ ನೀರಿನಿಂದ ಕಾವೇರಿಗೆ ಕಂಟಕ ಪ್ರಕರಣದಿಂದ
ಎಚ್ಚೆತ್ತ ಜಿಲ್ಲಾಡಳಿತ ಸ್ಥಳಕ್ಕೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ದಾವಣಗೆರೆ: ಕುಟುಂಬ ನಿಗೂಢ ನಾಪತ್ತೆ…ಪೊಲೀಸರಿಗೆ ತಲೆನೋವಾದ ಕೇಸ್!
ಡಿಸಿ ಡಾ. ಕುಮಾರ ನೇತೃತ್ವದಲ್ಲಿ ಹಲವು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸಮಸ್ಯೆಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಮೈಸೂರಿನ ಕೆ.ಸಾಲುಂಡಿ ಸಾವಿನ ಪ್ರಕರಣದಿಂದ ಮಂಡ್ಯ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಹಲವು ದೂರು ಬಂದ ಹಿನ್ನಲೆ ಸ್ಥಳಕ್ಕೆ ಭೇಟೆ ಕೊಟ್ಟು ಡಿಸಿ ಎಚ್ಚರಿಕೆ ನೀಡಿದ್ದಾರೆ.
ಕಾವೇರಿ ನದಿಗೆ ಮೈಸೂರಿನ ಕೊಳಚೆ ನೀರು ಸೇರ್ಪಡೆಯಾಗ ದಂತೆ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಕಾವೇರಿ ನದಿ ಮಲಿನವಾಗದಂತೆ ತಡೆಯಲು ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ್ದಾರೆ. ಮೈಸೂರಿನ ಮಹಾನಗರ ಪಾಲಿಕೆಗೆ ಪತ್ರ ಬರೆದು ಅಗತ್ಯ ಕ್ರಮಕ್ಕೆ ಸೂಚನೆ ನೀಡಲಾಗಿದ್ದು, ಕಾವೇರಿ ನೀರಿಗೆ ಮಲಿನವಾಗದಂತೆ ತಡೆಗೋಡೆ ನಿರ್ಮಿಸಲು ಅಧಿಕಾರಿಗಳಿಗೆ ಡಿಸಿ ಸೂಚನೆ ಕೊಟ್ಟಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)