ಬೆಳಗಾವಿ:- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್ ಪಾಟೀಲ್ ವಿರುದ್ಧ ದೂರು ದಾಖಲಾಗಿದೆ.
ಈ ಕುರಿತಾಗಿ ಸಂಜಯ್ ಪಾಟೀಲ್ಗೆ ಮಹಿಳಾ ಆಯೋಗ ನೋಟಿಸ್ ನೀಡಲಿದೆ. ಈ ವಿಚಾರವಾಗಿ ನಿನ್ನೆ ಕಾಂಗ್ರೆಸ್ ಕಾರ್ಯಕರ್ತೆಯರು ಬೆಳಗಾವಿಯ ಆದರ್ಶ ನಗರದಲ್ಲಿರುವ ಸಂಜಯ್ ಪಾಟೀಲ್ ಮನೆ ಎದುರು ಪ್ರತಿಭಟನೆ ಮಾಡಿದ್ದರು.
IPL 2024: ನಾಳೆ ಬೆಂಗಳೂರಿನಲ್ಲಿ IPL ಪಂದ್ಯ- ತವರಲ್ಲಿ ಗೆಲ್ಲಲು ಆರ್ಸಿಬಿ ಪ್ಲೇಯಿಂಗ್ 11 ಹೀಗಿದೆ!?
ಇನ್ನೂ ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ್ದ ಸಂಜಯ್ ಪಾಟೀಲ್, ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ಅತೀ ಹೆಚ್ಚು ಮಹಿಳೆಯರು ಸಮಾವೇಶದಲ್ಲಿ ಭಾಗಿಯಾಗಿದ್ದೀರಿ, ಇದರಿಂದ ಅವರಿಗೆ ಇಂದು ರಾತ್ರಿ ನಿದ್ದೆ ಬರುವುದಿಲ್ಲ. ಅದರಲ್ಲೂ ಇಂದು ರಮೇಶ್ ಜಾರಕಿಹೊಳಿ ಕೂಡ ಪ್ರಚಾರಕ್ಕೆ ಬಂದಿದ್ದರಿಂದ ಮಾತ್ರೆ ಜೊತೆಗೆ ಒಂದು ಪೆಗ್ ಎಕ್ಸ್ಟ್ರಾ ಹಾಕಿಕೊಳ್ಳಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.