ಮಂಡ್ಯ:- ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಶುರುವಾಗಿದ್ದು, ಮಂಡ್ಯ ಜಿಲ್ಲಾಡಳಿತ ಮತದಾನಕ್ಕೆ ಸಕಲ ಸಿದ್ದತೆ ಮಾಡಿಕೊಂಡಿದೆ.
ನಾಳೆ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ನಡೆಯಲಿದೆ. ಬೆಳಿಗ್ಗೆ 8ಗಂಟೆಯಿಂದ ಸಂಜೆ 4 ಗಂಟೆ ವರೆಗೆ ಮತದಾನ ಪ್ರಕ್ರಿಯೆ ಜರುಗಲಿದ್ದು, ಜಿಲ್ಲೆಯಲ್ಲಿ ಒಟ್ಟು 9 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ. ಜಿಲ್ಲೆಯಲ್ಲಿ ಮತದಾರರ ಒಟ್ಟು ಸಂಖ್ಯೆ 5403 ಇದ್ದು, ಚುನಾವಣಾ ಸಿಬ್ಬಂದಿಗಳಿಗೆ ಈಗಾಗಲೇ ತರಬೇತಿ ನೀಡಲಾಗಿದೆ.
ಚುನಾವಣಾ ವೀಕ್ಷಕರಾಗಿ ರವಿಶಂಕರ್ ಹಿರಿಯ ಐಎಎಸ್ ಅಧಿಕಾರಿ ನೇಮಕ ಮಾಡಲಾಗಿದೆ. ಎಲ್ಲಾ ತಾಲ್ಲೂಕು ಕಚೇರಿಯಲ್ಲೇ ಮತಗಟ್ಟೆಗಳ ನಿರ್ಮಾಣ ಮಾಡಲಾಗಿದೆ. ಮಂಡ್ಯದಲ್ಲಿ ತಾ.ಪಂ.ಹಾಗೂ ತಾಲ್ಲೂಕು ಕಚೇರಿಯಲ್ಲಿ ಎರಡೂ ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದ್ದು, ಈ ವರ್ಷ ದಕ್ಷಿಣ ಶಿಕ್ಷಕ ಚುನಾವಣೆಯ ಮತದಾರರಿಗೆ ಗುರುತಿನ ಚೀಟಿ ವಿತರಣೆ ಮಾಡಲಾಗಿದೆ.
61% ಓಟರ್ ಲೀಸ್ಟ್ ಪತ್ರ ವಿತರಣೆ ಮಾಡಲಾಗಿದ್ದು, ತಾಲ್ಲೂಕು ಕಚೇರಿಗಳಲ್ಲೆ ಮಸ್ಟರಿಂಗ್ ಕಾರ್ಯ ನಡೆದಿದೆ. ಡಿ ಮಸ್ಟರಿಂಗ್ ಕಾರ್ಯ ಡಿಸಿ ಕಚೇರಿಯಲ್ಲಿ ನಡೆಯಲಿದೆ.
ಮೈಸೂರಿಗೆ ತೆಗೆದುಕೊಂಡು ಹೋಗಿ ಡಿಪೊಸಿಟ್ ಮಾಡ್ತಾರೆ.
ನೇರಳೆ ಬಣ್ಣದ ಪೆನ್ನಿನಲ್ಲಿ ಮತ ಚಲಾವಣೆ ಮಾಡಲಾಗುತ್ತದೆ. ಶಿಕ್ಷಕರ ಕ್ಷೇತ್ರದ ಚುನಾವಣೆ ಮಾಡಲು ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು
ಮಂಡ್ಯದಲ್ಲಿ ಡಿಸಿ ಡಾ.ಕುಮಾರ ಹೇಳಿಕೆ ನೀಡಿದ್ದಾರೆ.