ಕಲಘಟಗಿ: ಆಸ್ತಿ ವಿಚಾರಕ್ಕೆ ಸಂಬಂಧಿಸಿ ತಮ್ಮನ ಹೆಂಡತಿಯನ್ನೇ ಕೊಲೆ ಮಾಡಿ ಪರಾರಿಯಾಗಲು ಯತ್ನಿಸಿದ ವ್ಯಕ್ತಿಯನ್ನು -ಗ್ರಾಮಸ್ಥರು ಹಿಡಿದು ಕಂಬಕ್ಕೆ ಕಟ್ಟಿ ಹಾಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ತಾಲ್ಲೂಕಿನ -ಗಳಗಿ-ಹುಲಕೊಪ್ಪ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ನೀರಿನ ಟ್ಯಾಂಕ್ ಸ್ಪಚ್ಛಗೊಳಿಸುವುದು ಹೇಗೆ ಗೊತ್ತಾ? ಈ ಸಿಂಪಲ್ಸ್ ಟ್ರಿಕ್ ಫಾಲೋ ಮಾಡಿ!
ಗ್ರಾಮದ ನಿವಾಸಿ ಸಕ್ಕೂಬಾಯಿ ಬಸಪ್ಪ ಕಮ್ಮಾರ (35) ಕೊಲೆಯಾದ -ಮಹಿಳೆ. ಶಿವಾಜಿ ಕಮ್ಮಾರ ಕೊಲೆ ಮಾಡಿದ ಆರೋಪಿ
‘ಆರೋಪಿಯು ಸಕ್ಕೂಬಾಯಿ ಕೊರಳಿಗೆ ಹಗ್ಗ ಬೀಗಿದು ಕೊಲೆ ಮಾಡಿದ್ದು, ಗ್ರಾಮಸ್ಥರು ಹಿಡಿದು ಒಪ್ಪಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮನಿ, ಡಿವೈಎಸ್ಪಿ ಶಿವಾನಂದ ಕಟಗಿ, ಸಿಪಿಐ ಶ್ರೀಶೈಲ್ ಕೌಜಲಗಿ, ಪಿಎಸ್ಐ ಕರಿವೀರಪ್ಪನವರ ಪರಿಶೀಲನೆ ನಡೆಸಿದ್ದಾರೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಕೊಲೆ ಆರೋಪಿ ಶಿವಾಜಿಯನ್ನು ಕಂಬಕ್ಕೆ ಕಟ್ಟಿ ಹಾಕಿರುವುದು
ವರದಿ: ಮಾರುತಿ ಲಮಾಣಿ