ಬೆಂಗಳೂರು:- ರಾಜಧಾನಿ ಬೆಂಗಳೂರಿನ ಬ್ಯಾಟರಾಯನಪುರದ ಸ್ಯಾಟ್ಲೈಟ್ ಬಸ್ ನಿಲ್ದಾಣದ ಬಳಿ ಚಾಕುವಿನಿಂದ ಇರಿದು ಬಾವನನ್ನೇ ಬಾಮೈದ ಕೊಂದ ಘಟನೆ ಜರುಗಿದೆ.
Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಆರೆಂಜ್ ಅಲರ್ಟ್ ಘೋಷಣೆ!
46 ವರ್ಷದ ವೆಂಕಟಾಚಲಪತಿ ಮೃತ ದುರ್ದೈವಿ. ಆರೋಪಿ ವಿಶ್ವನಾಥ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಕೊಲೆ ಆರೋಪಿ ವಿಶ್ವನಾಥ್ನನ್ನು ಕೊಲೆಯಾದ ಬಾವ ವೆಂಕಟಾಚಲಪತಿ, ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದರು. ಅಷ್ಟೇ ಅಲ್ಲದೆ 15 ದಿನಗಳ ಹಿಂದೆ ವಿಶ್ವನಾಥ್ಗಾಗಿ ವೆಂಕಟಾಚಲಪತಿಯವರು ಹೊಸಗುಡ್ಡದಹಳ್ಳಿಯಲ್ಲಿ ಬಾಡಿಗೆ ಮನೆ ಸಹ ಮಾಡಿದ್ದರು. ಆದರೆ ಇಷ್ಟೆಲ್ಲಾ ಸಹಾಯ ಮಾಡಿದ ಬಾವನನ್ನೇ ಕೊಲೆ ಮಾಡಿದ್ದಾನೆ.
ಕೊಲೆಯಾದ ವೆಂಕಟಾಚಲಪತಿ ಟಿ.ಆರ್.ಮಿಲ್ ನಿವಾಸಿ. ಇನ್ನು ಮತ್ತೊಂದೆಡೆ ಆರೋಪಿ ವಿಶ್ವನಾಥ್ನನ್ನು ಮಾತಾಡಿಸಲು ಮನೆಗೆ ಬಂದಿದ್ದ ಸಹೋದರಿಯ ಮೇಲೂ ವಿಶ್ವನಾಥ್ ದರ್ಪ ಮೆರೆದಿದ್ದಾನೆ.
ಸಹೋದರಿಗೂ ಥಳಿಸಿ ಮನೆಯಿಂದ ಹೊರದಬ್ಬಿದ್ದಾನೆ. ಇದನ್ನು ಪ್ರಶ್ನಿಸಲು ವಿಶ್ವನಾಥ್ ಮನೆಗೆ ವೆಂಕಟಾಚಲಪತಿ ಬಂದಾಗ ಚಾಕುವಿನಿಂದ ಹಲ್ಲೆ ನಡೆಸಿ 10ಕ್ಕೂ ಹೆಚ್ಚು ಬಾರಿ ಇರಿದು ಕೊಲೆ ಮಾಡಿದ್ದಾನೆ. ಕೊಲೆಗೈದ ನಂತರ ಮನೆ ಹೊರಗೆ ಚಾಕು ಹಿಡಿದು ಓಡಾಡುತ್ತ ಪಕ್ಕದ ಮನೆಯವರಿಗೆ ನಮ್ಮ ಬಾವನನ್ನು ಕೊಂದಿದ್ದೇನೆ ಎಂದು ಕಿರುಚಾಡಿದ್ದಾನೆ. ಈ ವಿಷಯ ಕಿವಿಗೆ ಬೀಳುತ್ತಿದ್ದಂತೆ ಕೂಡಲೇ ಸ್ಥಳೀಯರು ಬ್ಯಾಟರಾಯನಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿ ವಿಶ್ವನಾಥ್ನನ್ನು ಬಂಧಿಸಿದ್ದಾರೆ.