ಹುಬ್ಬಳ್ಳಿ:– MP ಟಿಕೆಟ್ ಕೊಡಿಸುವುದಾಗಿ ಕೋಟಿ-ಕೋಟಿ ವಂಚನೆ ಕೇಸ್ ಗೆ ಸಂಬಧಪಟ್ಟಂತೆ ಇದರಲ್ಲಿ ಜೋಶಿ ಪಾತ್ರ ಏನು ಇಲ್ಲ ಎಂದು ದೂರುದಾರೆ ಸುನೀತಾ ಚೌಹಾಣ್ ಸ್ಪಷ್ಟನೆ ಕೊಟ್ಟಿದ್ದಾರೆ.
ಬೈರತಿ ಸುರೇಶ್ ಮುಡಾ ಫೈಲ್ಗಳನ್ನು ಸುಟ್ಟು ಹಾಕಿದ್ದಾರೆ, ಕೂಡಲೇ ಬಂಧಿಸಬೇಕು: ಶೋಭಾ ಕರಂದ್ಲಾಜೆ!
ಈ ಸಂಬಂಧ ಮಾತನಾಡಿದ ಅವರು,ವಂಚನೆ ಪ್ರಕರಣದಲ್ಲಿ ಪ್ರಲ್ಹಾದ್ ಜೋಶಿ ಅವರ ಪಾತ್ರ ಏನೂ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಟಿಕೆಟ್ ಕೊಡಿಸುವುದಾಗಿ ಗೋಪಾಲ್ ಜೋಶಿ 2 ಕೋಟಿ ರೂ. ಬೇಡಿಕೆ ಇಟ್ಟಿದ್ದು, 25 ಲಕ್ಷ ರೂ. ಹಣ ಪಡೆದಿದ್ದರು. ಆದರೆ ಟಿಕೆಟ್ ಸಿಗದಿದ್ದಾಗ ಕೊಟ್ಟ ಹಣ ವಾಪಸ್ ನೀಡಿರಲಿಲ್ಲ. ಹೀಗಾಗಿ ನಾವು ಅನಿವಾರ್ಯವಾಗಿ ದೂರು ಕೊಟ್ಟಿದ್ದೇವೆ. ಇದರಲ್ಲಿ ಹೈಕಮಾಂಡ್ ಹೆಸರನ್ನ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಕೇಂದ್ರದ ಯಾವ ನಾಯಕರನ್ನು ಭೇಟಿ ಆಗಿಲ್ಲ. ನೇರವಾಗಿ ಗೋಪಾಲ್ ಜೋಶಿ ಅವರಿಗೆ ದುಡ್ಡು ಕೊಟ್ಟಿದ್ದೇನೆ. ಬಿಜೆಪಿಯಿಂದ ಟಿಕೆಟ್ ಕೊಡಿಸುತ್ತೇನೆ ಅಂದ್ದರು ಎಂದು ಹೇಳಿದ್ದಾರೆ.