ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಸಧ್ಯಕ್ಕೆ ಆಯುಷ್ ಔಷಧಿ ಕೊರತೆ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಳೆಗಾಲದಲ್ಲಿ ಟ್ರೆಕ್ಕಿಂಗ್ ಮಾಡುವವರಿಗೆ ರಾಜಧಾನಿ ಬೆಂಗಳೂರಿನ ಬೆಸ್ಟ್ ಪ್ಲೇಸ್ಗಳು ಇಲ್ಲಿದೆ!
ಈ ಸಂಬಂಧ ಮಾತನಾಡಿದ ಅವರು,ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಆಯುಷ್ ಔಷಧಿಗಳ ಕೊರತೆ ಇಲ್ಲ. ಸಿಬ್ಬಂದಿ ಹಾಜರಾತಿ ಬಗ್ಗೆ ತಿಳಿಯಲು ಇ ಹಾಜರಾತಿ ವ್ಯವಸ್ಥೆ ಜಾರಿ ಮಾಡಲಾಗಿದೆ ಎಂದರು.
ಪರಿಷತ್ ನಲ್ಲಿ ಆಯುಷ್ ಚಿಕಿತ್ಸಾ ಕೇಂದ್ರಗಳಲ್ಲಿ ವೈದ್ಯರ ಕೊರತೆ ಇದ್ದು, ವೈದ್ಯರ ನೇಮಕ ಮಾಡಬೇಕು. ಔಷಧಿ ಕೊರತೆ ಇದ್ದು, ಕೂಡಲೇ ಔಷಧಿ ಸರಬರಾಜು ಮಾಡಬೇಕು ಎಂದು ಆಗ್ರಹಿಸಿದರು.
ಗೋಪಿನಾಥನ್ ಅವರ ಮಾತಿಗೆ ಉತ್ತರಿಸಿದ ದಿನೇಶ್ ಗುಂಡೂರಾವ್, ಬೆಂಗಳೂರು ನಗರ, ಗ್ರಾಮಾಂತರದಲ್ಲಿ 24 ಆಯುಷ್ ಚಿಕಿತ್ಸಾಯಗಳಿವೆ. ಆಯುಷ್ ಚಿಕಿತ್ಸಾಲಯದಲ್ಲಿ ಔಷಧಿಗಳ ಕೊರತೆ ಇಲ್ಲ. ಸಮಯಕ್ಕೆ ಸರಿಯಾಗಿ ಔಷಧಿ ಸರಬರಾಜು ವ್ಯವಸ್ಥೆ ಮಾಡಿದ್ದೇವೆ. ಆಯುಷ್ ವೈದ್ಯರ ಕೊರತೆ ಇದೆ. ಖಾಲಿ ಹುದ್ದೆಗಳ ನೇಮಕ ಪ್ರಕ್ರಿಯೆ ಶುರು ಮಾಡುತ್ತೇವೆ ಎಂದರು.
ಆಯುಷ್ ಇಲಾಖೆಯಲ್ಲಿ ಹಾಜರಾತಿಗೆ ಇ ಹಾಜರಾತಿ ವ್ಯವಸ್ಥೆ ಜಾರಿ ಮಾಡಲಾಗಿದೆ. ಗೈರಾಗುವ ಸಿಬ್ಬಂದಿಗೆ ನಿಯಮದ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ಅವರು ಇಲಾಖೆಯ ಸಿಬ್ಬಂದಿಗೆ ಎಚ್ಚರಿಕೆ ನೀಡಿದರು.