ಚಿತ್ರದುರ್ಗ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಸಂಪೂರ್ಣ ಮನೆ ಧ್ವಂಸಗೊಂಡು ಸುಟ್ಟು ಕರಕಲಾದ ಘಟನೆ ಚಿತ್ರದುರ್ಗ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಧರ್ಮರಾಜ ಎಂಬವರಿಗೆ ಸೇರಿದ ಮನೆಯಾಗಿದ್ದು, ಮನೆಯವರೆಲ್ಲ ದೇವಸ್ಥಾನಕ್ಕೆ ಹೋಗಿದ್ದ ವೇಳೆ ಈ ದುರ್ಘಟನೆ ಸಭವಿಸಿದೆ. ಸಿಲಿಂಡರ್ ಸ್ಫೋಟದ ತೀವೃತೆಗೆ ಸಂಪೂರ್ಣನೆ ಛಿದ್ರವಾಗಿದೆ.
ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್: 72 ಲಕ್ಷ ರೂ. ನ ಕ್ಯಾನ್ಸರ್ ಔಷಧ ಇನ್ಮುಂದೆ 3 ಲಕ್ಷಕ್ಕೆ ಸಿಗುತ್ತೆ
ಇನ್ನು ಮನೆಯಲ್ಲಿದ್ದ ಬಟ್ಟೆ, ಬರೆ, ಧವಸ,ಧಾನ್ಯ ಸೇರಿದಂತೆ ಮನೆಯಲ್ಲಿದ್ದ ಸಂಪೂರ್ಣ ವಸ್ತುಗಳು ಸುಟ್ಟು ಕರಕಲಾಗಿವೆ. ಇನ್ನು ಮನೆಯಲ್ಲಿ ಯಾರೂ ಇಲ್ಲದ್ದರಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿ ನಂದಿಸುವ ವೇಳೆ ಅಗ್ನಿಶಾಮಕ ದಳದ ಸಿಬ್ಬಂದಿಗೆ ಗ್ರಾಮಸ್ಥರೂ ಕೂಡ ಸಹಾಯ ಮಾಡಿದ್ದಾರೆ.