ಕಲಬುರ್ಗಿ:- ಕಲಬುರಗಿಯ ಸಪ್ತಗಿರಿ ಆರೆಂಜ್ ಹೋಟೆಲ್ನಲ್ಲಿಸಿಲಿಂಡರ್ ಸ್ಫೋಟಗೊಂಡು ಹಲವರಿಗೆ ಗಂಭೀರ ಗಾಯವಾದ ಘಟನೆ ಜರುಗಿದೆ.
ನನ್ನ ಗಂಡನನ್ನು ಇಡಿ ಭಯೋತ್ಪಾದಕನಂತೆ ನಡೆಸಿಕೊಳ್ಳುತ್ತಿದ್ದಾರೆ – ಸುನಿತಾ ಕೇಜ್ರಿವಾಲ್ ಆಕ್ರೋಶ..!
ತಕ್ಷಣವೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೂಡಲೇ ಗಾಯಾಳುಗಳನ್ನ ಸ್ಥಳೀಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಕುರಿತು ಬ್ರಹ್ಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇಂದು ಬೆಳಗ್ಗೆ 6 ಗಂಟೆಗೆ ಎಂದಿನಂತೆ ಅಡುಗೆ ಸಿಬ್ಬಂದಿಗಳು ಬೆಳಗಿನ ಉಪಹಾರ ಮಾಡುವುದಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿದ್ದರು. ಈ ವೇಳೆ ಒಂದು ಸಿಲಿಂಡರ್ನಲ್ಲಿ ಲಿಕೇಜ್ ಕಂಡು ಬಂದ ತಕ್ಷಣ ಎಲ್ಲಾ ಸಿಬ್ಬಂದಿಗಳು ಹೊರಗೆ ಓಡಿ ಬಂದಿದ್ದಾರೆ. ಹತ್ತು ನಿಮಿಷದ ಬಳಿಕ ಸಿಬ್ಬಂದಿಗಳೆಲ್ಲ ಮತ್ತೆ ಕಿಚನ್ ರೂಂಗೆ ದೌಡಾಯಿಸಿದ್ದಾರೆ. ಈ ವೇಳೆ ಲಿಕ್ ಆಗುತ್ತಿದ್ದ ಸಿಲಿಂಡರ್ ಏಕಾಏಕಿ ಸ್ಪೋಟಗೊಂಡಿದೆ. ಈ ವೇಳೆ ಹತ್ತು ಜನ ಗಾಯಗೊಂಡಿದ್ದರೆ, ನಾಲ್ವರು ಅಡುಗೆ ಸಿಬ್ಬಂದಿಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.