ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಆ್ಯಂಡ್ ಗ್ಯಾಂಗ್ ಕಸ್ಟಡಿ ಇಂದು ಅಂತ್ಯವಾಗಲಿದೆ.
ಬಹುತೇಕ ದರ್ಶನ್ ಮತ್ತು ಇತರ ಆರೋಪಿಗಳು ಇಂದು ಪರಪ್ಪನ ಅಗ್ರಹಾರ ಜೈಲಿಗೆ ಹೋಗೋದು ಫಿಕ್ಸ್ ಅಂತಾ ಹೇಳಲಾಗುತ್ತಿದೆ. ಈಗಾಗಲೇ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಬಹುತೇಕ ಅಂತಿಮ ಹಂತಕ್ಕೆ ಬಂದಿದೆ.
ರೇಣುಕಾಸ್ವಾಮಿ ಕೊಲೆ ನಡೆದ ಸ್ಥಳ, ಕಿಡ್ನ್ಯಾಪ್ ಸ್ಥಳ, ಮೃತದೇಹ ಸಿಕ್ಕ ಸ್ಥಳ ಸೇರಿ ಆರೋಪಿಗಳ ಮನೆಯಲ್ಲಿ ಪೊಲೀಸರು ಮಹಜರು ಪೂರ್ಣ ಮಾಡಿದ್ದಾರೆ. ಜೊತೆಗೆ ಕೃತ್ಯಕ್ಕೆ ಬಳಸಿದ ಹಲವು ವಸ್ತುಗಳನ್ನ ಸೀಜ್ ಮಾಡಲಾಗಿದೆ. ಹೀಗಾಗಿ ಇಂದು ಕೋರ್ಟ್ ಹಾಜರುಪಡಿಸಿ ದರ್ಶನ್ನನ್ನ ಮತ್ತೆ ಕಸ್ಟಡಿಗೆ ಕೇಳೋದು ಡೌಟ್ ಅಂತಾ ಹೇಳಲಾಗುತ್ತಿದೆ.
ಇನ್ನು, ಇಂದು ದರ್ಶನ್ ಆ್ಯಂಡ್ ಗ್ಯಾಂಗ್ನ ಪೊಲೀಸ್ ಕಸ್ಟಡಿ ಅಂತ್ಯ ಹಿನ್ನೆಲೆಯಲ್ಲಿ ನಿನ್ನೆಯೇ 17 ಆರೋಪಿಗಳಿಗೆ ಮೆಡಿಕಲ್ ಚೆಕಪ್ ನಡೆಸಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದರ್ಶನ್, ಪವಿತ್ರಾಗೌಡ ಸೇರಿ 17 ಮಂದಿಗೆ ಮೆಡಿಕಲ್ ಚೆಕಪ್ ಮಾಡಿಸಲಾಗಿದೆ. ಪವಿತ್ರಾಗೌಡಗೆ ಇಸಿಜಿ ಹಾಗೂ ಬಿಪಿ ಪಲ್ಸ್ ಚೆಕಪ್ ಮಾಡಲಾಗಿದೆ.
ವಿಶೇಷ ಎಂದರೇ ಆರೋಪಿಗಳಿಗೆ ಮೆಡಿಕಲ್ ಟೆಸ್ಟ್ ಜೊತೆಗೆ ಡಿಎನ್ಎ ಟೆಸ್ಟ್ ಕೂಡ ನಡೆದಿದೆ. ಆರೋಪಿಗಳ ರಕ್ತ, ಕೂದಲಿನ ಮಾದರಿ ಸಂಗ್ರಹ ಮಾಡಲಾಗಿದ್ದು, ಕೊಲೆ ನಡೆದ ಜಾಗದಲ್ಲಿ ಪತ್ತೆಯಾದ ಕೂದಲು, ರಕ್ತದ ಮಾದರಿಗೂ ಮ್ಯಾಚ್ ಮಾಡಲಿದ್ದಾರೆ. ಒಂದ್ವೇಳೆ ಎರಡಕ್ಕೂ ತಾಳೆ ಆದರೆ ಕೊಲೆ ಪ್ರಕರಣಕ್ಕೆ ಮತ್ತಷ್ಟು ಪ್ರಬಲ ಸಾಕ್ಷ್ಯ ಆಗಲಿದೆ.
ಆರೋಪಿಗಳಿಗೆ ಯಾವೆಲ್ಲಾ ಮೆಡಿಕಲ್ ಟೆಸ್ಟ್ ಮಾಡಲಾಯ್ತು ಅನ್ನೋದನ್ನ ನೋಡೋದಾದರೆ ಆರೋಪಿಯ ಎತ್ತರ ಅಳತೆ, ಆರೋಪಿಯ ತೂಕ, ಆರೋಪಿಯ ಕೂದಲಿನ ಸ್ಯಾಂಪಲ್, ರಕ್ತದ ಮಾದರಿ ಸೇರಿದಂತೆ ಕಣ್ಣಿನ ಪರೀಕ್ಷೆ ಮಾಡಲಾಗಿದೆ.