ಬೆಂಗಳೂರು ಗ್ರಾಮಾಂತರ: ಲೋಕಸಭಾ ಚುನಾವಣೆಗೆ ರಣಕಣ ರಂಗೇರಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ಸುರೇಶ್ (D.K.Suresh) ಗುರುವಾರ ಉಮೇದುವಾರಿಕೆ ಸಲ್ಲಿಸಿದ್ದಾರೆ. ರಾಮನಗರದಲ್ಲಿ (Ramanagara) ಬೃಹತ್ ಮೆರವಣಿಗೆ ಹೊರಟು ನಾಮಪತ್ರ ಸಲ್ಲಿಸಿ ಶಕ್ತಿ ಪ್ರದರ್ಶಿಸಿದ್ದಾರೆ
ನಾಮಪತ್ರ ಸಲ್ಲಿಕೆಗೂ ಮುನ್ನ ಮನೆದೇವರಿಗೆ ಡಿ.ಕೆ.ಸುರೇಶ್ ಪೂಜೆ ಸಲ್ಲಿಸಿದರು. ಬೆಳಗ್ಗೆ 9 ಗಂಟೆಗೆ ಕನಕಪುರದ ಕೆಂಕೆರಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ನಂತರ ರಾಮನಗರದ ಚಾಮುಂಡೇಶ್ವರಿ ದೇವರ ದರ್ಶನ ಪಡೆದರು. ನಗರದ ಪ್ರಮುಖ ಮಸೀದಿ, ಚರ್ಚ್ಗೂ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಜೊತೆಗೆ ಮನೆಯಲ್ಲಿ ಅಣ್ಣ ಡಿ.ಕೆ.ಶಿವಕುಮಾರ್ ಹಾಗೂ ಅತ್ತಿಗೆ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು.
Gruha Lakshmi Money: ಗೃಹಲಕ್ಷ್ಮಿ 7ನೇ ಕಂತಿನ ಹಣ ಬಂದಿಲ್ಲವೇ..? ಹಾಗಿದ್ರೆ ಈ ಕೆಲಸ ತಪ್ಪದೆ ಮಾಡಿ ಹಣ ಪಡೆದುಕೊಳ್ಳಿ
ರಾಮನಗರದ ಚಾಮುಂಡೇಶ್ವರಿ ದೇವಸ್ಥಾನದ ಮುಂದೆ ಡಿ.ಕೆ.ಸುರೇಶ್ ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ತಮಟೆ, ವಾದ್ಯ, ಪಟ್ಟದ ಕುಣಿತ, ವೀರಗಾಸೆ ಮೂಲಕ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ಗೆ ಸ್ವಾಗತ ಕೋರಿದರು.