ಕೊಪ್ಪಳ:- ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 98 ಅಪರಾಧಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ಘಟನೆ ಜರುಗಿದೆ.
ಗಲಾಟೆ ಪ್ರಕರಣದ ಒಟ್ಟು 101 ಅಪರಾಧಿಗಳ ಪೈಕಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ನೀಡಿ ಇಂದು ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಜೀವಾವಧಿ ಶಿಕ್ಷೆಗೊಳಗಾದ 98 ಆರೋಪಿಗಳಿಗೆ ತಲಾ ಐದು ಸಾವಿರ ರೂ ಹಾಗೂ ಇನ್ನು ಮೂವರು ಅಪರಾಧಿಗಳಿಗೆ ತಲಾ ಎರಡು ಸಾವಿರ ದಂಡ ವಿಧಿಸಿದೆ.
2014 ರ ಆಗಸ್ಟ್ 28 ರಂದು ನಡೆದಿದ್ದ ಸವರ್ಣೀಯರು ಮತ್ತು ದಲಿತರ ನಡುವೆ ಗಲಾಟೆ ನಡೆದಿತ್ತು. ಈ ಸಂಬಂಧ ಅಟ್ರಾಸಿಟಿ, ಹಲ್ಲೆ, ಜೀವ ಬೆದರಿಕೆ ಪ್ರಕರಣ ದಾಖಲಾಗಿತ್ತು. ಇನ್ನು ಮೊನ್ನೇ ಅಂದರೆ ಅಕ್ಟೋಬರ್ 21 ರಂದು ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, 101 ಆರೋಪಿಗಳನ್ನು ಅಪರಾಧಿಗಳು ಎಂದು ತೀರ್ಪು ನೀಡಿ ಇಂದಿಗೆ ಶಿಕ್ಷೆ ಪ್ರಮಾಣ ತೀರ್ಪು ಕಾಯ್ದಿರಿಸಿತ್ತು. ಇದೀಗ ಕೋರ್ಟ್ ಅಂತಿಮ ತೀರ್ಪು ನೀಡಿದ್ದು, ಅಪರಾಧಿಗಳ ಕುಟುಂಬಸ್ಥರು ಕೋರ್ಟ್ ಆವರಣದಲ್ಲೇ ಕಣ್ಣಿರು ಹಾಕಿದರು.