ಮೈಸೂರು:– ಮುಸ್ಲಿಂ ಯುವಕನಿಂದ ದಲಿತ ಯುವಕನ ಹತ್ಯೆ! ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
Breaking News: ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ !
ಈ ಸಂಬಂಧ ಮಾತನಾಡಿದ ಅವರು,ಮೇಲಿಂದ ಮೇಲೆ ಹಿಂದೂಗಳ ಹತ್ಯೆಯಾಗ್ತಿದ್ದರೂ ಸರ್ಕಾರ ಏನು ಮಾಡದ ಸ್ಥಿತಿಯಲ್ಲಿದೆ. ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ. ಜಿ ಪರಮೇಶ್ವರ ಏನು ಬಳೆ ತೊಟ್ಟುಕೊಂಡಿದ್ದಾರಾ ಎಂದು ಪ್ರಶ್ನಿಸಿದ್ದಾರೆ.
ಹಿಂದೂಗಳ ಹತ್ಯೆಯಾಗ್ತಿದೆ. ಸರ್ಕಾರ ಏನೂ ಮಾಡದ ಸ್ಥಿತಿಯಲ್ಲಿದೆ. ರಾಜ್ಯ ಸರ್ಕಾರ ಮೊದಲು ಅಲ್ಪಸಂಖ್ಯಾತರ ತುಷ್ಟೀಕರಣ ನಿಲ್ಲಿಸಬೇಕು. ಜಿಹಾದಿಗಳಿಗೆ, ಕೊಲೆ ಮಾಡುವ ಪುಂಡರಿಗೆ ಭಯವೇ ಇಲ್ಲದಂತೆ ಆಗಿದೆ. ಈ ಕೊಲೆಗಳಿಗೆ ರಾಜ್ಯ ಸರ್ಕಾರವೇ ಹೊಣೆ ಎಂಬುದು ಗೊತ್ತಾಗುತ್ತಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಸಿಎಂಗೆ ಒಳ್ಳೆಯ ಬುದ್ಧಿ ಕೊಡು ಅಂತಾ ಚಾಮುಂಡಿ ತಾಯಿಗೆ ಬೇಡಿಕೊಳ್ತೇನೆ. ಹಿಂದುಗಳ ಹತ್ಯೆ ನಿಲ್ಲಿಸುವ ಮನಸ್ಸು ಕೊಡು ಎಂದು ಬೇಡುತ್ತೇನೆ ಎಂದು ವಿಜಯೇಂದ್ರ ಹೇಳಿದ್ದಾರೆ.