ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇವತ್ತು ಇರಬಹುದು ನಾಳೆ ಇಲ್ಲದೆ ಇರಬಹುದು. ಆದರೆ, ಕಾಂಗ್ರೆಸ್ ಪಕ್ಷ ಮುಂದುವರಿಯುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಮಾತನಾಡಿದ ಅವರು, ” ಎಫ್ ಐ ಆರ್ ಆದರೆ ಸಿಎಂ ರಾಜೀನಾಮೆ ಕೊಡಬೇಕು ಅನ್ನುವುದಾದರೆ ಗೋದ್ರಾ ಪ್ರಕರಣ ಆದಾಗ ಅಂದಿನ ಸಿಎಂ ನರೇಂದ್ರ ಮೋದಿ ರಾಜೀನಾಮೆ ನೀಡಿದ್ದರಾ? ಅಮಿತ್ ಶಾ ಅವರದು ಸಾಕಷ್ಟು ಪ್ರಕರಣ ಆಗಿತ್ತು ಅವರು ರಾಜೀನಾಮೆ ನೀಡಿದ್ದರಾ? ” ಎಂದು ಪ್ರಶ್ನಿಸಿದರು.
Condoms: ಸೆಕ್ಸ್ ಎಂಜಾಯ್ ಮಾಡಲು ಕಾಂಡೋಮ್ ಆಯ್ಕೆ ಹೇಗಿರಬೇಕು ಗೊತ್ತಾ..?
ಯಾರನ್ನೇ ಆಗಲಿ ವೈಯುಕ್ತಿಕವಾಗಿ ಟಾರ್ಗೆಟ್ ಮಾಡಬಾರದು. ಸಿದ್ದರಾಮಯ್ಯ ಅವರ ಇಮೇಜ್ ಡ್ಯಾಮೇಜ್ ಮಾಡಿದರೆ ಅದರಿಂದ ಪಕ್ಷಕ್ಕೂ ಡ್ಯಾಮೇಜ್ ಆಗುತ್ತದೆ. ಅವರ ಆಸಕ್ತಿ ಇರೋದು ಕಾಂಗ್ರೆಸ್ ಪಕ್ಷಕ್ಕೆ ಡ್ಯಾಮೇಜ್ ಮಾಡುವುದು ವೈಯುಕ್ತಿಕ ಅಲ್ಲ. ಸಿದ್ದರಾಮಯ್ಯ ಇವತ್ತು ಇರಬಹುದು, ನಾಳೆ ಇಲ್ಲದೆ ಇರಬಹುದು. ಆದರೆ ಪಕ್ಷ ಮುಂದುವರಿಯುತ್ತದೆ ಎಂದರು.