ಬೆಂಗಳೂರು:-ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಹಕ್ಕಿರುವ ನಟ ದರ್ಶನ್ ಹಾಗೂ ಆತನ ತಂಡವನ್ನ ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಿಗೆ ಸ್ಥಳಾಂತರ ಮಾಡಲಾಗಿದೆ
ರಾಜಾತಿಥ್ಯದ ಬಗ್ಗೆ ಜೈಲಿಗೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಕೇಳಬೇಕು: ಸುಮಲತಾ ಅಂಬರೀಶ್
ಹತ್ಯೆ ಪ್ರಕರಣದಲ್ಲಿ ಆರೋಪಿಗಳನ್ನ ರಾಜ್ಯದ ವಿವಿಧ ಕಾರಾಗೃಹಗಳಿಗೆ ಸ್ಥಳಾಂತರ ಮಾಡಬೇಕೆಂದು ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧೀಕ್ಷಕರು ನಗರದ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಮನವಿ ಪುರಸ್ಕರಿಸಿರುವ ನ್ಯಾಯಾಲಯವ ಆರೋಪಿಗಳ ಸ್ಥಳಾಂತರ ಮಾಡಲು ಅನುಮತಿ ನೀಡಿದೆ.
ದರ್ಶನ್ ಬಳ್ಳಾರಿ ಜೈಲಿಗೆ
ಪ್ರಕರಣದಲ್ಲಿ ಒಟ್ಟು 17 ಮಂದಿ ಆರೋಪಿಗಳನ್ನ ಬಂಧಿಸಲಾಗಿತ್ತು. ಈ ಪೈಕಿ ರವಿ, ಕಾರ್ತಿಕ್, ನಿಖಿಲ್ ಹಾಗೂ ಕೇಶವಮೂರ್ತಿ ಅವರನ್ನ ಈಗಾಗಲೇ ತುಮಕೂರು ಜೈಲಿನಲ್ಲಿದ್ದಾರೆ. ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ನನ್ನ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.
ಪವನ್ ಹಾಗೂ ರಾಘವೇಂದ್ರ ನಂದೀಶ್, ಮೈಸೂರು ಕಾರಾಗೃಹ, ಜಗದೀಶ್ ಶಿವಮೊಗ್ಗ ಧನರಾಜ್ -ಧಾರವಾಡ, ವಿನಯ್ -ವಿಜಯಪುರ, ನಾಗರಾಜ್ -ಕಲಬುರಗಿ, ಲಕ್ಷ್ಮಣ – ಶಿವಮೊಗ್ಗ, ಪ್ರದೂಶ್ ಬೆಳಗಾವಿ ಜೈಲಿಗೆ ವರ್ಗಾಯಿಸಲಾಗಿದೆ.
ಪವಿತ್ರಗೌಡ, ಅನುಕುಮಾರ್ ಹಾಗೂ ದೀಪಕ್ ನನ್ನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಳಿಸಲಾಗಿದೆ.