ಚಿತ್ರದುರ್ಗ : ಪವಿತ್ರ ಗೌಡಗೆ ಅಶ್ಲೀಲ ಪೋಟೋ ಹಾಗೂ ಮೆಸೇಜ್ ಮಾಡಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ ಅವರನ್ನು ಅರೆಸ್ಟ್ ಮಾಡಲಾಗಿದೆ. ಚಿತ್ರದುರ್ಗ ನಗರದ ತುರುವನೂರು ರಸ್ತೆಯ ಮೊದನೇ ಕ್ರಾಸ್ ನ ನಿವಾಸಿಯಾಗಿರುವ ರೇಣುಕಸ್ವಾಮಿ ಅವರು ಮೆಡಿಕಲ್ ನಲ್ಲಿ ಕೆಲಸ ಮಾಡಿಕೊಂಡಿದ್ದನು.
ರಾಷ್ಟ್ರೀಯ ಹೆದ್ದಾರಿ ಪಕ್ಕದ ಪ್ರಗತಿ ಗ್ರಾಮೀಣ ಬ್ಯಾಂಕ್ ಗಳಿರುವ ಮೆಡಿಕಲ್ ನಲ್ಲಿ ಮೃತ ರೇಣುಕಾ ಸ್ವಾಮಿ ಕೆಲಸ ಮಾಡಿಕೊಂಡಿದ್ದನು. ಕಳೆದ ಮೂರು ದಿನಗಳ ಹಿಂದೆ ದರ್ಶನ್ ಅವರನ್ನು ಬೆಂಗಳೂರಿಗೆ ಕರೆಸಿಕೊಂಡು ಕೊಲೆ ಮಾಡಲಾಗಿದೆ.
Ginger Side Effects: ಅತಿಯಾದ ಶುಂಠಿ ಸೇವನೆಯಿಂದ ಏನೆಲ್ಲಾ ಅಡ್ಡ ಪರಿಣಾಮಗಳಾಗುತ್ತೆ ಗೊತ್ತಾ..?
ತುರುವನೂರು ರಸ್ತೆಯಲ್ಲಿರುವ ಮೃತನ ಮನೆಗೆ ಸ್ಥಳೀಯ ಚಿತ್ರದುರ್ಗ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆಯಲ್ಲಿ ಯಾರು ಇಲ್ಲದಿರುವುದು ತಿಳಿದು ಬಂದಿದೆ. ಮನೆಯ ಸದಸ್ಯರು ಎಲ್ಲರೂ ಬೆಂಗಳೂರಿಗೆ ತೆರಳುತ್ತಿದ್ದಾರೆ ಎನ್ನಲಾಗಿದೆ.