ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಘಟನೆ ನಡೆದು ಸಾಕಷ್ಟು ದಿನ ಕಳೆದಿದ್ದರು ನಟಿ ಸಮಲತಾ ಅಂಬರೀಶ್ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದು ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ಕೊನೆಗೂ ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ನಟಿ ಪ್ರತಿಕ್ರಿಯಿಸಿದ್ದಾರೆ.
ದರ್ಶನ್ರನ್ನು ತಮ್ಮ ದೊಡ್ಡ ಮಗ ಎಂದು ಸುಮಲತಾ ಅಂಬರೀಷ್ ಹೇಳುತ್ತಿರುತ್ತಾರೆ. ದರ್ಶನ್ ಕೂಡ ಸುಮಲತಾ ಅವರನ್ನು ಮದರ್ ಇಂಡಿಯಾ ಎಂದೇ ಕರೆಯುತ್ತಿದ್ದರು. ಅದರೆ, ಕೊಲೆ ಕೇಸ್ ಆಗಿ ಇಷ್ಟು ದಿನಗಳಾದರೂ ದರ್ಶನ್ ಪರವಾಗಿಯಾಗಲಿ, ವಿರುದ್ಧವಾಗಿ ಆಗಲಿ ಸುಮಲತಾ ಅಂಬರೀಷ್ ಹಾಗೂ ಅವರ ಪುತ್ರ ಅಭಿಷೇಕ್ ಅಂಬರೀಷ್ ಮಾತನಾಡಿರಲಿಲ್ಲ. ಅದರೆ ಇದೀಗ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕ್ರಿಪ್ಟಿಕ್ ಪೋಸ್ಟ್ ಹಂಚಿಕೊಂಡಿರುವ ಸುಮಲತಾ ಅಂಬರೀಷ್, ದರ್ಶನ್ ಪ್ರಕರಣದ ಬಗ್ಗೆ ಮಾರ್ಮಿಕವಾಗಿ ಉತ್ತರ ನೀಡಿದ್ದಾರೆ ಎನ್ನಲಾಗಿದೆ.
![Demo](https://ainlivenews.com/wp-content/uploads/2023/12/spoorthi-1.jpg)
ಇನ್ಸ್ಟಾಗ್ರಾಮ್ ಸ್ಟೋರೀಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಸುಮಲತಾ, ಭಗವದ್ಗೀತೆಯಲ್ಲಿ ಕೃಷ್ಣ ಹೇಳಿದ ಸಾಲನ್ನು ಹಂಚಿಕೊಂಡಿದ್ದಾರೆ. ‘ ಎಲ್ಲವೂ ಸರಿ ಹೋಗುವ ಮೊದಲು ಬಹಳಷ್ಟು ತಪ್ಪಾಗುತ್ತದೆ. ಈ ಹಂತದಲ್ಲಿ ಕೇವಲ ನಂಬಿಕೆ ಇರಲಿ..’ ಎನ್ನುವ ಸಾಲನ್ನು ಹಂಚಿಕೊಂಡಿದ್ದಾರೆ. ಇದು ನಟ ದರ್ಶನ್ ಅವರಿಗೆ ಸಂಬಂಧಪಟ್ಟ ಹಾಗೆಯೇ ಸುಮಲತಾ ಮಾಡಿರುವ ಪೋಸ್ಟ್ ಎಂದು ಕೆಲವರು ಮಾತನಾಡಿಕೊಳ್ಳುತ್ತಿದ್ದಾರೆ. ದರ್ಶನ್ಗೆ ಎದುರಾದ ಸಂಕಷ್ಟಗಳ ಬಗ್ಗೆ ಪರೋಕ್ಷವಾಗಿ ಸುಮಲತಾ ಈ ಪೋಸ್ಟ್ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ ಎನ್ನಲಾಗಿದೆ.
ಕಳೆದ ಸಂಸತ್ ಚುನಾವಣೆಯಲ್ಲಿ ಮಂಡ್ಯದಲ್ಲಿ ಪಕ್ಷೇತರವಾಗಿ ಸ್ಪರ್ಧೆ ಮಾಡಿದ್ದ ಸುಮಲತಾ ಅಂಬರೀಷ್ ಗೆಲುವಿನಲ್ಲಿ ದರ್ಶನ್ ಅವರ ಪಾತ್ರ ಮಹತ್ವದ್ದಾಗಿತ್ತು. ಚುನಾವಣೆಯ ಆರಂಭದಿಂದ ಅತ್ಯಂದವರೆಗೂ ಅವರು ಸುಮಲತಾ ಅವರ ಬೆಂಬಲವಾಗಿ ನಿಂತಿದ್ದರು. ಮಂಡ್ಯದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ್ದ ದರ್ಶನ್ “ಅಮ್ಮ ಕಣ್ಮುಚ್ಚಿ ಹಾಳು ಬಾವಿಗೆ ಬೀಳು ಅಂದ್ರು ನಾನು ಬೀಳುತ್ತೇನೆ. ಒಟ್ಟಿನಲ್ಲಿ ಅಮ್ಮ ಏನು ಹೇಳ್ತಾರೋ ಅದನ್ನು ಶಿರಸಾವಹಿಸಿ ಪಾಲಿಸುವುದಷ್ಟೇ ನನ್ನ ಮತ್ತು ನನ್ನ ತಮ್ಮನ ಕೆಲಸ. ಅಷ್ಟೊಂದು ಗಾಢವಾದ ಬಾಂಧವ್ಯ ನಮಗೂ ಆ ಮನೆಗೂ ಇದೆ” ಎಂದಿದ್ದರು.
![](https://ainlivenews.com/wp-content/uploads/2024/01/Ad-Banner-copy-scaled.jpg)