ಮಂಡ್ಯ:- ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ಆರೋಪಿ ದರ್ಶನ್ ಅಭಿಮಾನಿ ಮಂಗಳಾ ವಿರುದ್ಧ ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ವಿಧಾನಸೌಧದಲ್ಲಿ 10ನೇ ವಿಶ್ವ ಯೋಗ ದಿನಾಚರಣೆ: DCM ಡಿಕೆಶಿ ಸೇರಿ ಹಲವು ಗಣ್ಯರಿಂದ ಯೋಗಾಸನ!
ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಜಾನಿಕೀರಾಮ್ ದೂರು ನೀಡಿದ್ದಾರೆ. ನಟ ದರ್ಶನ್ ಮೇಲೆ ಕೊಲೆ ಆರೋಪ ಬರುವಂತೆ ಹೆಚ್ಡಿ ಕುಮಾರಸ್ವಾಮಿ ಮಾಡಿದ್ದಾನೆ. ದುಡ್ಡು ಕೊಟ್ಟು ದರ್ಶನ್ ವಿರುದ್ದ ಧಿಕ್ಕಾರ ಕೂಗಿಸುತ್ತೀಯಾ? ಮಾಜಿ ಸಂಸದೆ ಸುಮಲತಾ ಅಂಬರೀಶ್ ಮಂಡ್ಯದಲ್ಲಿ ನಿನಗೆ ಸ್ಪರ್ಧಿಸಲು ಅವಕಾಶ ಕೊಟ್ಟಿರುವುದಕ್ಕೆ ಡಿ ಬಾಸ್ ವಿರುದ್ಧ ಸ್ಕೆಚ್ ಹಾಕುತ್ತೀಯಾ? ಸುಮಲತಾ ಅವರಿಂದ ಭಿಕ್ಷೆ ಹಾಕಿಸಿಕೊಂಡ ಮಗ” ಎಂದು ಏಕವಚನದಲ್ಲಿ ಸಮಾಜಿಕ ಜಾಲತಾಣದಲ್ಲಿ ದರ್ಶನ ಅಭಿಮಾನಿ ಮಂಗಳಾ ಅವರು ನಿಂದಿಸಿದ್ದಾರೆ.