ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರೋ ನಟ ದರ್ಶನ್ (Darshan) ನೋವಿನಲ್ಲೇ ದಿನಗಳನ್ನು ದೂಡುತ್ತಿದ್ದಾರಂತೆ. ಆ ನೋವನ್ನು ಕಡಿಮೆ ಮಾಡಿಕೊಳ್ಳುವುದಕ್ಕಾಗಿ ಅವರು ಯೋಗ ಮತ್ತು ಹನುಮಾನ್ ಚಾಲೀಸ್ ಪಠಣಕ್ಕೆ ಮುಂದಾಗಿದ್ದಾರಂತೆ. ನಿತ್ಯವೂ ಈಗ ಜೈಲಿನಲ್ಲಿರುವ ದರ್ಶನ್ ಮಾನಸಿಕವಾಗಿಯೂ ಕುಗ್ಗಿರುವ ಹಿನ್ನೆಲೆಯಲ್ಲಿ, ಯೋಗದ ಮೊರೆ ಹೋಗಿದ್ದಾರೆ.
Bangalore: ಗಂಡನ ಅಗಲಿಕೆಯ ನೋವು: ನೇಣು ಬಿಗಿದುಕೊಂಡು ತಾಯಿ, ಮಗ ಆತ್ಮಹತ್ಯೆ..!
ಪರಪ್ಪನ ಅಗ್ರಹಾರ ಜೈಲಿಗೆ ದರ್ಶನ್ ಸೇರಿ ಮೂರು ವಾರಗಳು ಕಳೆದಿವೆ. ಒಂದೊಂದು ದಿನವನ್ನೂ ಅವರು ಕಳೆಯೋಕೆ ಕಷ್ಟ ಪಡ್ತಿದ್ದಾರೆ. ಆರೋಗ್ಯದಲ್ಲಿ ಆಗಾಗ್ಗೆ ಸಮಸ್ಯೆ ಕಾಣಿಸಿಕೊಳ್ತಿದೆ. ನಿತ್ಯವೂ ಅವರ ತೂಕ ಕಳೆದುಕೊಳ್ಳುತ್ತಿದ್ದಾರೆ. ಜೊತೆಗೆ ಜೈಲಿನ ಆಹಾರ ಕೂಡ ಅವರಿಗೆ ಒಗ್ಗುತ್ತಿಲ್ಲ. ಇದರಿಂದಾಗಿ ದರ್ಶನ್ ಕುಗ್ಗಿ ಹೋಗಿದ್ದಾರಂತೆ. ಖಿನ್ನತೆಯಿಂದಲೂ ಬಳಲುತ್ತಿದ್ದಾರಂತೆ.
ರೇಣುಕಾ ಸ್ವಾಮಿ ಪ್ರಕರಣದಿಂದ ಭವಿಷ್ಯದಲ್ಲಿ ಎದುರಾಗಬಹುದಾದ ಸಮಸ್ಯೆ, ಜೈಲಿನಲ್ಲಿ ಕಾಡುತ್ತಿರುವ ಒಂಟಿತನ, ತನ್ನ ಕುಟುಂಬ, ಸ್ನೇಹತರಿಂದ ದೂರಾಗಿ ಒಂಟಿಯಾಗಿ ಬದುಕಬೇಕಾದ ಅನಿವಾರ್ಯತೆ ಎಲ್ಲವುದರಿಂದ ಮಾನಸಿಕವಾಗಿ ಕುಗ್ಗಿರುವ ದರ್ಶನ್, ಮಾನಸಿಕ ಹಾಗೂ ದೈಹಿಕ ಕ್ಷಮತೆ ಕಾಪಾಡಿಕೊಳ್ಳಲು ಜೈಲಿನಲ್ಲಿ ಯೋಗದ ಮೊರೆ ಹೋಗಿದ್ದಾರೆ ಎನ್ನಲಾಗುತ್ತಿದೆ. ಪ್ರತಿದಿನ ಎರಡು ಬಾರಿ ದರ್ಶನ್ ಜೈಲಿನಲ್ಲಿಯೇ ಯೋಗಾಭ್ಯಾಸ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ದರ್ಶನ್ರ ಆರೋಗ್ಯದ ಬಗ್ಗೆ ಚಿಂತಿತರಾಗಿದ್ದ ಜೈಲಾಧಿಕಾರಿಗಳಿಗೂ ಇದು ನಿರಾಳತೆ ಮೂಡಿಸಿದೆ.