ಬೆಂಗಳೂರು:- ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಹಾಗೂ ಸಹಚರ ಖೈದಿಗಳಿಗೆ ಜೈಲಿನಲ್ಲಿ ವಿಶೇಷ ಸೌಲಭ್ಯಗಳನ್ನು ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆರೋಪಿಗಳನ್ನು ಬೇರೆ ಬೇರೆ ಜೈಲಿಗೆ ಇಂದು ಸ್ಥಳಾಂತರ ಮಾಡಲಾಗಿದೆ. ಕೋರ್ಟ್ ಆದೇಶದನ್ವಯ ನಟ ದರ್ಶನ್ರನ್ನು ಬಳ್ಳಾರಿಯ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ.
ತಿಮ್ಮಪ್ಪನ ಭಕ್ತರಿಗೆ ಗುಡ್ನ್ಯೂಸ್: ತಿರುಪತಿ ಲಡ್ಡು ಪ್ರಸಾದಕ್ಕೆ ಕರ್ನಾಟಕದ ತುಪ್ಪ!
ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಒಟ್ಟು 17 ಮಂದಿ ವಿಚಾರಣಾಧೀನ ಖೈದಿಗಳಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿದ್ದರು. ಇವರಿಗೆ ರಾಜಾತಿಥ್ಯ ಸಿಗುತ್ತಿರುವುದಕ್ಕೆ ಸಾಕ್ಷಿ ಎಂಬಂತೆ ಒಂದಷ್ಟು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು.
ಫೋಟೋಗಳು ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಕರ್ನಾಟಕ ಗೃಹ ಇಲಾಖೆ ಹಾಗೂ ಪೊಲೀಸರು ನ್ಯಾಯಾಲಯದ ಆದೇಶ ಪಡೆದು, ಇಂದು ರಾಜ್ಯದ ವಿವಿಧ ಜೈಲುಗಳಿಗೆ ಆರೋಪಿಗಳ್ನು ಸ್ಥಳಾಂತರ ಮಾಡಿದ್ದಾರೆ. ಈ ಪೈಕಿ ನಟ ದರ್ಶನ್ ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರ ಮಾಡಿದ್ದಾರೆ.
ತಮ್ಮ ನೆಚ್ಚಿನ ನಟ ಬಳ್ಳಾರಿ ಜೈಲಿಗೆ ಶಿಫ್ಟ್ ವಿಚಾರ ತಿಳಿದು ಅಪಾರ ಅಭಿಮಾನಿಗಳು ಕಾರಾಗೃಹದತ್ತ ದೌಡಾಯಿಸಿದ್ದಾರೆ.