ಸ್ಯಾಂಡಲ್ವುಡ್ ನಟಿ ರಕ್ಷಿತಾ ಸಹೋದರ ರಾಣಾ ಮದುವೆ ಫೆ.7ರಂದು ಅದ್ಧೂರಿಯಾಗಿ ಜರುಗಿದೆ. ಫೆ.8ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆದಿದೆ. ಈ ಸಂಭ್ರಮದಲ್ಲಿ ದರ್ಶನ್ ನಟ ದರ್ಶನ್ ಭಾಗಿಯಾಗಿ ನವ ಜೋಡಿಗೆ ಶುಭ ಹಾರೈಸಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ೭ ತಿಂಗಳ ಬಳಿಕ ಹೊರ ಬಂದಿರುವ ದರ್ಶನ್ ಇದೇ ಮೊದಲ ಭಾರಿಗೆ ಶುಭಕಾರ್ಯದಲ್ಲಿ ದರ್ಶನ್ ಭಾಗಿಯಾಗಿದ್ದಾರೆ. ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕರ್ ತೂಗುದೀಪ ಜೊತೆ ದರ್ಶನ್ ಆಗಮಿಸಿದ್ದಾರೆ. ಪ್ರೇಮ್ ಹೆಗಲ ಮೇಲೆ ಕೈಹಾಕಿಕೊಂಡು ದರ್ಶನ್ ವೇದಿಕೆಗೆ ಎಂಟ್ರಿ ಕೊಟ್ಟಿದ್ದಾರೆ. ಹೊಸ ಬಾಳಿಗೆ ಕಾಲಿಟ್ಟಿರುವ ರಾಣಾಗೆ ದರ್ಶನ್ ಶುಭ ಹಾರೈಸಿದ್ದಾರೆ.
ಗೆಳತಿ ರಕ್ಷಿತಾಗೆ ಕೊಟ್ಟ ಮಾತಿನಂತೆ ಕಾರ್ಯಕ್ರಮಕ್ಕೆ ಕುಟುಂಬ ಸಮೇತ ದರ್ಶನ್ ಭಾಗಿಯಾಗಿದ್ದಾರೆ. ಇನ್ನೂ ರಾಣಾ ದಂಪತಿಯ ಆರತಕ್ಷತೆಯಲ್ಲಿ ರಾಧಿಕಾ ಕುಮಾರಸ್ವಾಮಿ, ಧ್ರುವ ಸರ್ಜಾ, ಅಮೂಲ್ಯ ದಂಪತಿ, ತರುಣ್ ಸುಧೀರ್ ಸೇರಿದಂತೆ ಅನೇಕರು ಭಾಗಿಯಾಗಿ ನವ ಜೋಡಿಗೆ ಶುಭ ಹಾರೈಸಿದ್ದಾರೆ.