ಧಾರವಾಡ: ನಟ ದರ್ಶನ್ ಅವರಿಗೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನೀಡಲಾಗುತ್ತಿರುವ ರಾಜಾತಿಥ್ಯದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಕಾರ್ಮಿಕ ಸಚಿವ ಸಂತೋಷ ಲಾಡ್ ಸಿಡಿಮಿಡಿಗೊಂಡಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಅವರ ಬಗ್ಗೆ ನನ್ನನ್ನು ಹೀಗೆ ಕೇಳಿದರೆ ಅದರ ಬಗ್ಗೆ ನಾನು ಏನಂತ ಕಾಮೆಂಟ್ ಮಾಡಲಿ? ಅದರ ಬಗ್ಗೆ ನಾನೇನೂ ಕಾಮೆಂಟ್ ಮಾಡೋದಿಲ್ಲ ಎಂದಿದ್ದಾರೆ.
ಇನ್ನು ಜಿಂದಾಲ್ಗೆ ಭೂಮಿ ಕೊಡುತ್ತಿರುವುದನ್ನು ವಿರೋಧಿಸುತ್ತಿರುವ ಶಾಸಕ ಅರವಿಂದ ಬೆಲ್ಲದ ಅವರ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಲಾಡ್, ಬೆಲ್ಲದ ಕೈಗಾರಿಕೆ ಹೊಂದಿದವರು. ಕೆಐಎಡಿಬಿ ಜಾಗವನ್ನು ಅವರು ಲೀಸ್ ಮೇಲೆ ತೆಗೆದುಕೊಂಡಿದ್ದಾರೆ. ಅದು ಕೂಡ ಒಂದು ಆ್ಯಕ್ಟ್ನಲ್ಲಿ ಬರುತ್ತದೆ. ಯಾವುದೇ ಒಂದು ಸಂಸ್ಥೆಗೆ ಲೀಸ್ ಕೊಟ್ಟಾಗ ಕಾನೂನು ಪ್ರಕಾರ ಷರತ್ತು ಇರುತ್ತದೆ.
Tesla: ಇದೆಂಥಾ ಆಫರ್! ದಿನಕ್ಕೆ 28 ಸಾವಿರ ರೂಪಾಯಿ ಸಂಬಳ ನೀಡುತ್ತೆ ಈ ಕಂಪನಿ..! ಮಿಸ್ ಮಾಡ್ಬೇಡಿ
ಅವರು ಸಂಪೂರ್ಣ ದುಡ್ಡು ಕೊಟ್ಟಿರುತ್ತಾರೆ ಆದರೆ ಷರತ್ತು ಮಾಡಿ ಅವರಿಗೆ ಭೂಮಿ ಕೊಡಲಾಗುತ್ತದೆ. ಈ ಬಗ್ಗೆ ಬೆಲ್ಲದ ಅವರಿಗೆ ಬೇರೆ ಅಭಿಪ್ರಾಯ ಇರಬಹುದು. ಕೇಂದ್ರ ಸರ್ಕಾರ ಅವರದ್ದೇ ಇದೆ ಯಾರ್ಯಾರಿಗೆ ಎಷ್ಟೆಷ್ಟು ಭೂಮಿ ಕೊಟಿದ್ದಾರೆ ಎಂಬುದನ್ನು ಅವರೇ ಹೇಳಲಿ ಎಂದರು.
ನಾವು ಜಿಂದಾಲ್ಗೆ ಅನುಕೂಲ ಮಾಡಿ ಜಾಗ ಕೊಡುತ್ತಿಲ್ಲ. 90 ಸಾವಿರ ಸಾವಿರ ಕೋಟಿ ರೂಪಾಯಿಯನ್ನು ಜಿಂದಾಲ್ ಇಲ್ಲಿ ಹೂಡಿಕೆ ಮಾಡಿದೆ. ಅದು ನಾನು ಹುಟ್ಟಿ ಬೆಳೆದ ಜಾಗ. ಬೆಲ್ಲದ ಅವರಿಗೆ ಆ ಜಾಗದ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ. ಮಾಹಿತಿ ಇಲ್ಲದಿದ್ರೆ ನಾವು ಕೊಡುತ್ತೇವೆ ಎಂದರು.
ಕೈ ಶಾಸಕನಿಗೆ ಬಿಜೆಪಿ 100 ಕೋಟಿ ಆಫರ್ ಕೊಟ್ಟ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವ ಲಾಡ್, ಬಿಜೆಪಿಯವರು ಈಗ ಗವರ್ನರ್ ಮೂಲಕ ಸರ್ಕಾರ ಬೀಳಿಸಲು ನೋಡುತ್ತಿದ್ದಾರೆ. ಅದಾನಿ, ಅಂಬಾನಿ ದುಡ್ಡು ಇದ್ದವರು ಏನು ಬೇಕಾದರೂ ಮಾಡಬಹುದು. ಬಿಜೆಪಿಗೆ ಫಂಡಿಂಗ್ ಅವರೇ ಮಾಡುತ್ತಾರೆ. ಹೀಗಾಗಿ ಅವರ ಬಳಿ ಸಾಕಷ್ಟು ದುಡ್ಡಿದೆ. ಇಲ್ಲಿಯವರೆಗೆ ಎಷ್ಟು ಸರ್ಕಾರ ಬೀಳಿಸಿದ್ದಾರೆ ಎಂದು ಬೆಲ್ಲದ ಅವರು ಹೇಳಲಿ. ಮೋದಿ ಸರ್ಕಾರ ಬಂದ ಮೇಲೆ ಎಷ್ಟು ಯಶಸ್ವಿಯಾಗಿ ಸರ್ಕಾರ ಬೀಳಿಸಿದ್ದಾರೆ ಎಂಬುದನ್ನು ಹೇಳಲಿ ಎಂದರು.