ದಾವಣಗೆರೆ:- ಹರಿಹರ ಗ್ರಾಮಾಂತರ ಪೊಲೀಸರು, DCRB ಪೊಲೀಸರ ಕಾರ್ಯಾಚಣೆ ಮಾಡಿ ಖೋಟಾ ನೋಟು ತಯಾರಿಸಿ ಚಲಾವಣೆ ಮಾಡುತ್ತಿದ್ದ ಓರ್ವ ಇಂಜಿನಿಯರ್ ಸೇರಿ 6 ಜನರನ್ನು ಅರೆಸ್ಟ್ ಮಾಡಿದ್ದಾರೆ.
ಕುಬೇರಪ್ಪ ತಳವಾರ್, ಹರೀಶ್ ಗೌಡ, ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ಇಂಜಿನಿಯರ್ ಜೆ.ರುದ್ರೇಶ್, ಮೈಸೂರು ಮೂಲದ ಮನೋಜ್ ಗೌಡ, ಮಂಡ್ಯ ಮೂಲದ ಸಂದೀಪ್ ಮತ್ತು ಚಿತ್ರದುರ್ಗ ಮೂಲದ ಕೃಷ್ಣ ನಾಯ್ಕನನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ 7.70 ಲಕ್ಷ ರೂ. ಮೌಲ್ಯದ 500, 200 ಮುಖಬೆಲೆಯ ಖೋಟಾ ನೋಟು ವಶಕ್ಕೆ ಪಡೆಯಲಾಗಿದೆ.
ಖೋಟಾ ನೋಟು ತಯಾರು ಮಾಡಲು ಬಳಸುತ್ತಿದ್ದ ಲ್ಯಾಪ್ಟಾಪ್ ಸೇರಿ, ಮೂರು ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಖೋಟಾ ನೋಟು ತಯಾರಿ ಬಗ್ಗೆ ಇಂಜಿನಿಯರ್ ರುದ್ರೇಶ್ ಒಪ್ಪಿಕೊಂಡಿದ್ದಾರೆ ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾಹಿತಿ ನೀಡಿದ್ದಾರೆ