ಬೆಂಗಳೂರು:– 600 ಕೆಜಿಗೂ ಹೆಚ್ಚು ಪಟಾಕಿ ಸಂಗ್ರಹ, ಮಾರಾಟಕ್ಕೆ ಡಿಸಿ ಅವಕಾಶ ನೀಡುವಂತಿಲ್ಲ ಎಂದು ಹೈಕೋರ್ಟ್ ಹೇಳಿದೆ.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಹೇಳಿದೆ.
![Demo](https://ainlivenews.com/wp-content/uploads/2023/12/spoorthi-1.jpg)
ಅಲ್ಲದೆ, ಪಟಾಕಿ ಮಾರಾಟಕ್ಕೆ ಪರವಾನಿಗೆ ನೀಡುವ ಸಂದರ್ಭದಲ್ಲಿ ಸ್ಫೋಟಕಗಳ ಕಾಯಿದೆಯಲ್ಲಿ ಉಲ್ಲೇಖಿಸಿರುವಂತೆ ಪಟಾಕಿ ಸಂಗ್ರಹಾಗಾರಗಳು ವಸತಿ ಪ್ರದೇಶದಿಂದ ದೂರದಲ್ಲಿರಬೇಕು. ಅಗ್ನಿ ಶಾಮಕಗಳು ಲಭ್ಯ ಇರಬೇಕು. ಪಟಾಕಿ ಸಂಗ್ರಹಾಗಾರಗಳಲ್ಲಿ ನೀರಿನ ಬಕೆಟ್ಗಳ ಸಂಗ್ರಹವೂ ಇರಬೇಕಿದ್ದು ಪರವಾನಿಗಿ ಪಡೆದ ಅಂಗಡಿಗಳಲ್ಲಿ ನಿಯಮ ಹಾಗೂ ಸುರಕ್ಷತಾ ಕ್ರಮ ಉಲ್ಲಂಘನೆಯಾಗಿದ್ದಲ್ಲಿ ಕಾಲಕಾಲಕ್ಕೆ ಪರಿಶೀಲನೆ ನಡೆಸಿ ಅಂತಹ ಪರವಾನಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ಇತ್ತೀಚೆಗೆ ಅತ್ತಿಬೆಲೆಯಲ್ಲಿ ಅಗ್ನಿ ದುರಂತ ನಡೆದು ಹಲವು ಮಂದಿ ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ ತಮ್ಮ ಪರವಾನಿಗೆ ರದ್ದುಪಡಿಸಿದ್ದ ಕ್ರಮ ಪ್ರಶ್ನಿಸಿ ಬೆಂಗಳೂರು ಪೂರ್ವ ತಾಲೂಕಿನ ಬಿದರಹಳ್ಳಿ ಹೋಬಳಿಯ ವೀರನಹಳ್ಳಿ ಗ್ರಾಮದ ನಿವಾಸಿ ಕಲಾವತಿ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಆದೇಶ ನೀಡಿದೆ.
ಜೊತೆಗೆ, 600 ಕೆಜಿ ಪಟಾಕಿ ಸಂಗ್ರಹಿಸುವ ಸ್ಥಳದಲ್ಲಿ 1000 ಕೆಜಿ ತೂಕದ ಪಟಾಕಿ ಸಂಗ್ರಹಿಸಿ ಮಾರಾಟ ಮಾಡುವುದಕ್ಕೆ ಅರ್ಜಿದಾರರಿಗೆ ಜಿಲ್ಲಾಧಿಕಾರಿಗಳು ಪರವಾನಿಗೆ ನೀಡಿರುವುದಕ್ಕೆ ಪೀಠ ಅಚ್ಚರಿ ವ್ಯಕ್ತಪಡಿಸಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)