Kalaburgi: ಮೌತ್ ಕ್ಯಾನ್ಸರ್​ನಿಂದ ಬಳಲುತ್ತಿದ್ದ ವೈರ್​ಲೆಸ್ ಇನ್ಸ್​ಪೆಕ್ಟರ್​ ಶವ ರೈಲ್ವೆ ಹಳಿ ಮೇಲೆ ಪತ್ತೆ…!

ಕಲಬುರಗಿ:- ಕಳೆದ ಕೆಲ ದಿನಗಳಿಂದ ಮೌತ್ ಕ್ಯಾನ್ಸರ್​ನಿಂದ ಬಳಲುತ್ತಿದ್ದ ಇನ್ಸ್​ಪೆಕ್ಟರ್​ರೊಬ್ಬರ​ ಶವ ರೈಲು ಹಳಿ ಮೇಲೆ ಪತ್ತೆಯಾಗಿದೆ. ಕೃಷ್ಣಾ ನದಿಯಲ್ಲಿ 6 ಜನರು ಜಲಸಮಾಧಿ…ತೆಪ್ಪ ಮಗುಚಿ ನೀರುಪಾಲು…! ಕಾಯಿಲೆಯಿಂದಲೇ ಮಾನಸಿಕವಾಗಿ ನೊಂದು ಡಿಪ್ರೆಷನ್ ಗೊಳಗಾಗಿದ್ದರು. ಇದೇ ಕಾರಣಕ್ಕೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅದಾಗ್ಯೂ ಸಾವಿಗೆ ನಿಖರ ಕಾರಣ ಇನ್ನೂ ಗೊತ್ತಾಗಿಲ್ಲ. ರೈಲ್ಬೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಶವವನ್ನ ಕಲಬುರಗಿ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ