ಬೆಂಗಳೂರು:- ವಿದ್ಯುತ್ ತಂತಿ ಸ್ಪರ್ಶಿಸಿ ಆನೆಗಳ ಸಾವನ್ನಪ್ಪಿದ ಹಿನ್ನೆಲೆ ಎಸ್ಕಾಂಗಳಿಗೆ
ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಸಿಜೆ ಎನ್ವಿ ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ರಿದ್ದ ಪೀಠ ನೋಟಿಸ್ ಜಾರಿ ಮಾಡಿದೆ. ಕೆಳಚಾಚಿದ ವಿದ್ಯುತ್ ತಂತಿಗಳಿಂದ ಆನೆಗಳ ಜೀವಹಾನಿ ಉಂಟಾಗುತ್ತಿವೆ. ಹಾಗಾಗಿ ಆನೆಗಳ ಸಾವು ತಡೆಗೆ ಕೈಗೊಂಡ ಕ್ರಮಗಳ ಬಗ್ಗೆ ಆಗಸ್ಟ್ 12 ರೊಳಗೆ ವರದಿ ಸಲ್ಲಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ.
ನಾಗರಹೊಳೆ ಅರಣ್ಯ ಪ್ರದೇಶದ ಗಡಿಯಲ್ಲಿ ಹಾಕಲಾಗಿದ್ದ ಸೋಲಾರ್ ವಿದ್ಯುತ್ ತಂತಿ ಬೇಲಿಯನ್ನು ದಸರಾ ಆನೆ ಅಶ್ವತ್ಥಾಮ ತುಳಿದು ದುರಂತ ಅಂತ್ಯಕಂಡಿತ್ತು. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಭೀಮನಕಟ್ಟೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಇತ್ತೀಚೆಗೆ ಘಟನೆ ನಡೆದಿತ್ತು.