ಬೆಂಗಳೂರು: ವಿಧಾನಸೌಧಕ್ಕೆ ಹೋಗುವಾಗ ಕೊಂದೇ ಕೊಲ್ತೀನಿ, ಇಲ್ಲ ಮನೆಯೊಳಗೆ ಬಂದು ಕೊಲೆ ಮಾಡ್ತೀನಿ ಎಂದು ಮಾಜಿ ಸಚಿವ ಗೋಪಾಲಯ್ಯಗೆ (K. Gopalaiah) ಮಾಜಿ ಕಾರ್ಪೊರೇಟರ್ ಪದ್ಮರಾಜ್ (Padmaraj) ಕೊಲೆ ಬೆದರಿಕೆ (Life Threat) ಹಾಕಿದ್ದಾರೆ.
HSRP Bigg Update: ವಾಹನಗಳಿಗೆ HSRP ಹಾಕಲು ಗಡುವು ವಿಸ್ತರಣೆ: 3 ತಿಂಗಳು ಅವಧಿ ವಿಸ್ತರಿಸಿದ ಸಚಿವರು
ಮಂಗಳವಾರ ರಾತ್ರಿ ಗೋಪಾಲಯ್ಯ ಮನೆ ಬಳಿ ಬಂದು ಪದ್ಮರಾಜ್ ಗಲಾಟೆ ಮಾಡಿದ್ದು, ಹಳೆ ವೈಷಮ್ಯದಿಂದ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆ ಕಾಮಾಕ್ಷಿಪಾಳ್ಯ (Kamakshipalya) ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ. ರಾತ್ರಿ ಮಾಜಿ ಸಚಿವ ಗೋಪಾಲಯ್ಯ ಹಾಗೂ ಮಾಜಿ ಕಾರ್ಪೊರೇಟರ್ ಪದ್ಮರಾಜ್ ನಡುವೆ ಗಲಾಟೆ ನಡೆದಿದೆ. ಇದೀಗ ಕಾಮಾಕ್ಷಿಪಾಳ್ಯ ಸ್ಟೇಶನ್ನಲ್ಲಿ ಗೋಪಾಲಯ್ಯ ಕುಳಿತಿದ್ದು, ಪದ್ಮರಾಜ್ ಮನೆ ಮುಂದೆ 4 ಹೊಯ್ಸಳ ಪೊಲೀಸರು ಜಮಾವಣೆಗೊಂಡಿದ್ದಾರೆ.
Atal Pension : ಅಟಲ್ ಪಿಂಚಣಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? : ಆನ್ಲೈನ್ನಲ್ಲೇ ಅರ್ಜಿ ಸಲ್ಲಿಸಿ
ಪದ್ಮರಾಜ್ ಮಂಗಳವಾರ ತಡರಾತ್ರಿ ಗೋಪಾಲಯ್ಯಗೆ ಕರೆ ಮಾಡಿ ಹಣ ಬೇಕೆಂದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಹಣ ಕೊಡದಿದ್ರೆ ಏನು ಮಾಡ್ತೀನಿ ಗೊತ್ತಾ ಎಂದು ಬೆದರಿಕೆಯೊಡ್ಡಿದ್ದು, ಇದರಿಂದ ನೊಂದ ಗೋಪಾಲಯ್ಯ ಇಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದರ ಜೊತೆಗೆ ಸ್ಪೀಕರ್ ಮತ್ತು ಸಿಎಂಗೂ ದೂರು ಕೊಡಲು ಗೋಪಾಲಯ್ಯ ಮುಂದಾಗಿದ್ದಾರೆ.