ನವದೆಹಲಿ: ಪ್ರಸ್ತುತ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿರುವ ವಿನಯ್ ಕುಮಾರ್ ಸಕ್ಸೇನಾ 2001ರಲ್ಲಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ನರ್ಮದಾ ಬಚಾವೋ ಆಂದೋಲನದ ನಾಯಕಿ ಹಾಗೂ ಹೋರಾಟಗಾರ್ತಿ ಪಾಟ್ಕರ್ ಅವರಿಗೆ ದೆಹಲಿ ಕೋರ್ಟ್ 5 ತಿಂಗಳ ಜೈಲು ಶಿಕ್ಷೆ ವಿಧಿಸಿದೆ.
ತೀರ್ಪಿನಲ್ಲಿ ವಿ.ಕೆ ಸಕ್ಸೇನಾ ಅವರಿಗೆ 10 ಲಕ್ಷ ರೂ. ಪಾವತಿಸುವಂತೆಯೂ ನ್ಯಾಯಾಲಯ ಸೂಚಿಸಿದೆ. ಅಲ್ಲದೇ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಮೇಧಾ ಪಾಟ್ಕರ್ ಅವರ ಶಿಕ್ಷೆಯನ್ನು ಆಗಸ್ಟ್ 1 ರವರೆಗೆ ತಡೆ ಹಿಡಿಯಲಾಗಿದೆ.
![Demo](https://ainlivenews.com/wp-content/uploads/2023/12/spoorthi-1.jpg)
ಚೆನ್ನೈನ ಐಫೋನ್ ಫ್ಯಾಕ್ಟರಿಯಲ್ಲಿ ವಿವಾಹಿತರಿಗೆ ನೋ ಎಂಟ್ರಿ..! ಏನಿದು ವಿವಾದ?
ಷರತ್ತಿನ ಮೇಲೆ ತನ್ನನ್ನು ಬಿಡುಗಡೆ ಮಾಡಬೇಕೆಂಬ ಪಾಟ್ಕರ್ ಅವರ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯ, `ವಯಸ್ಸು ಮತ್ತು ಅನಾರೋಗ್ಯವನ್ನು ಪರಿಗಣಿಸಿ, ಹೆಚ್ಚಿನ ಶಿಕ್ಷೆ ನೀಡಲು ಭಯಸುವುದಿಲ್ಲ’ ಎಂದಿದೆ. ಕಳೆದ ಮೇ.24ರಂದು ಸಾಕೇತ್ ನ್ಯಾಯಾಲಯ ಮಾನನಷ್ಟದ ಅಪರಾಧಕ್ಕಾಗಿ ಪಾಟ್ಕರ್ ಅವರನ್ನು ದೋಷಿ ಘೋಷಿಸಿತ್ತು.
ನ್ಯಾಯಾಲಯದ ಆದೇಶದ ಕುರಿತು ಪ್ರತಿಕ್ರಿಯಿಸಿದ ಪಾಟ್ಕರ್, `ಸತ್ಯವನ್ನು ಎಂದಿಗೂ ಸೋಲಿಸಲು ಸಾಧ್ಯವಿಲ್ಲ. ನಾವು ಯಾರನ್ನೂ ದೂಷಿಸಲು ಪ್ರಯತ್ನಿಸಿಲ್ಲ. ನಾವು ನಮ್ಮ ಕೆಲಸವನ್ನು ಮಾತ್ರ ಮಾಡುತ್ತೇವೆ. ನಾನು ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸುತ್ತೇನೆ’ ಎಂದು ಹೇಳಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)