ಬೆಂಗಳೂರು: ರಕ್ಷಣಾ ಮಂತ್ರಿ ಕಾನ್ವೇ ಹೋಗುವಾಗ ಹೆಡ್ ಕಾನ್ಸಟೇಬಲ್ ಮೇಲೆ ಬೈಕ್ ಹತ್ತಿಸಿದ್ದ ಪುಂಡನನ್ನು ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಹಮ್ಮದ್ ದಿಲ್ವಾರ್ ಹುಸೇನ್ ಬಂಧಿತಆರೋಪಿಯಾಗಿದ್ದು,
ಫೆಬ್ರವರಿ 9ರಂದು ಸೆಂಟ್ರಲ್ ಸ್ಟ್ರೀಟ್ನ ಬಿಆರ್ವಿ ಜಂಕ್ಷನ್ನಿಂದ ಅನಿಲ್ ಕುಂಬ್ಳೆ ಸರ್ಕಲ್ ನಡುವಿನ ಮಾರ್ಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಾಜಿನಗರ ಸಂಚಾರ ಠಾಣೆಯ ಹೆಡ್ ಕಾನ್ಸ್ಟೇಬಲ್ ದಿನೇಶ್ ಅವರತ್ತ ಆರೋಪಿ ತನ್ನ ಸ್ಕೂಟರ್ ನುಗ್ಗಿಸಿದ್ದ.
Bima Sakhi Yojana: ಮೋದಿ ಸರ್ಕಾರದಿಂದ ಬಂಫರ್ ಆಫರ್! ಈ ಯೋಜನೆಯಡಿ ಮಹಿಳೆಯರಿಗೆ ಸಿಗಲಿದೆ ರೂ. 7,000
ಇದರಿಂದ ನೆಲಕ್ಕೆ ಬಿದ್ದಿದ್ದ ದಿನೇಶ್ ಅವರ ತಲೆ, ಬಲ ಕಿವಿ, ಕೈಕಾಲಿಗೆ ಗಾಯಗಳಾಗಿದ್ದವು. ಗಾಯಗೊಂಡಿದ್ದ ಹೆಡ್ ಕಾನ್ಸ್ಟೇಬಲ್ ದಿನೇಶ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಕಬ್ಬನ್ ಪಾರ್ಕ್ ಠಾಣೆಗೆ ದೂರು ನೀಡಿದ್ದರು. ಸದ್ಯ ಆರೋಪಿಯನ್ನ ಬಂಧಿಸಿ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಜೈಲಿಗಟ್ಟಿದ್ದಾರೆ.