ನವದೆಹಲಿ: ದೆಹಲಿ-ಮೀರತ್ ಪ್ರಾದೇಶಿಕ ರಾಪಿಡ್ ಟ್ರಾನ್ಸಿಟ್ ಸಿಸ್ಟಮ್ಗೆ (RRTS) ಅನುದಾನ ಒದಗಿಸುವಲ್ಲಿ ವಿಳಂಬ ಮಾಡುತ್ತಿರುವ ದೆಹಲಿ ಸರ್ಕಾರವನ್ನು ಸುಪ್ರೀಂಕೋರ್ಟ್ (Supreme Court) ಮತ್ತೆ ತರಾಟೆಗೆ ತೆಗೆದುಕೊಂಡಿದೆ. ಸರ್ಕಾರದ ಅನುದಾನ ನೀಡದಿದ್ದಲ್ಲಿ ಜಾಹೀರಾತಿಗೆ ಮೀಸಲಿಟ್ಟ ಹಣವನ್ನು ಬಳಸುವ ಆದೇಶವನ್ನು ನ್ಯಾಯಾಲಯ ಪುನರ್ ಉಚ್ಚರಿಸಿದೆ.
ಕ್ಷಿಪ್ರ ರೈಲು ಯೋಜನೆಗೆ ಹಣವನ್ನು ಒದಗಿಸಲು ದೆಹಲಿ (Delhi) ಸರ್ಕಾರ ವಿಫಲವಾದರೆ, ಈ ಮೊತ್ತವನ್ನು ಅರವಿಂದ್ ಕೇಜ್ರಿವಾಲ್ (Arvind Crazywal) ಸರ್ಕಾರದ ಈ ವರ್ಷದ ಜಾಹೀರಾತು ಬಜೆಟ್ನಿಂದ ನೀಡುವ ಬಗ್ಗೆ ಕಳೆದ ನವೆಂಬರ್ನಲ್ಲಿ ನ್ಯಾಯಾಲಯ ಆದೇಶಿಸಿತ್ತು. ಇಂದಿನ ವಿಚಾರಣೆಯಲ್ಲಿ, ಸರ್ಕಾರ ಬಜೆಟ್ ಹಂಚಿಕೆಗೆ ಅನುಮತಿ ನೀಡಿದೆ ಮತ್ತು ಕೇಂದ್ರದ ಅನುಮೋದನೆಗೆ ಕಾಯುತ್ತಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದೆ. 7 ದಿನಗಳೊಳಗೆ ಕೇಂದ್ರದ ಒಪ್ಪಿಗೆ ಪಡೆಯುವಂತೆ ದೆಹಲಿ ಸರ್ಕಾರಕ್ಕೆ ಈ ವೇಳೆ ಸುಪ್ರೀಂಕೋರ್ಟ್ ಸೂಚಿಸಿದೆ.
Nail Cutting At Night: ರಾತ್ರಿ ಯಾಕೆ ಉಗುರು ಕತ್ತರಿಸಬಾರದು ಗೊತ್ತಾ..? ಇಲ್ಲಿದೆ ನೋಡಿ ಕಾರಣ
ಹಿಂದಿನ ವಿಚಾರಣೆಯ ವೇಳೆ, ದೆಹಲಿ ಸರ್ಕಾರ ಜಾಹೀರಾತಿಗಾಗಿ 580 ಕೋಟಿ ರೂ. ಬಜೆಟ್ ಮಾಡಬಹುದು ಆದರೆ ಯೋಜನೆಗೆ ಪಾವತಿಸಬೇಕಾದ 400 ಕೋಟಿ ರೂ. ಹಣ ಒದಗಿಸಲು ಸಾಧ್ಯವಿಲ್ಲವೇ? ಎಂಬ ವಿಚಾರವನ್ನು ನ್ಯಾಯಾಲಯ ಗಮನಿಸಿತ್ತು. ಅಲ್ಲದೇ ರಾಷ್ಟ್ರೀಯ ಯೋಜನೆಗಳ ಮೇಲೆ ಇದು ಪರಿಣಾಮ ಬೀರಿದರೆ ಜಾಹೀರಾತಿಗಾಗಿ ಮೀಸಲಿಟ್ಟ ಹಣವನ್ನು ಖರ್ಚು ಮಾಡಲು ನಿರ್ದೇಶಿಸುತ್ತೇವೆ ಎಂದು ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಅವರಿದ್ದ ಪೀಠ ಹೇಳಿತ್ತು.