ದಾವಣಗೆರೆ:- ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಗೆ ಆಗ್ರಹಿಸಿ ದಾವಣಗೆರೆಯಲ್ಲಿ ಇಂದು ಬೃಹತ್ ಹೋರಾಟ ನಡೆಯಲಿದೆ.
ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ನಡೆಯಲಿದ್ದು, ರಾ.ಹೆದ್ದಾರಿ 48ರಲ್ಲಿ ಸ್ವಾಮೀಜಿಗಳು ಇಷ್ಟಲಿಂಗ ಪೂಜೆ ನಡೆಸಲಿದ್ದಾರೆ. ಮೊದಲು ಇಷ್ಟಲಿಂಗ ಪೂಜೆ ಬಳಿಕ ಹೆದ್ದಾರಿ ತಡೆದು ಜಯಮೃತ್ಯುಂಜಯ ಶ್ರೀ ಪ್ರತಿಭಟನೆ ನಡೆಸಲಿದ್ದು, ಸರ್ಕಾರಕ್ಕೆ ಬಿಸಿ ಮುಟ್ಟಿಸಲಿದ್ದಾರೆ.
ಲೋಕಸಭೆ ಚುನಾವಣೆಯೊಳಗೆ ನಮಗೆ 2ಎ ಮೀಸಲಾತಿ ಘೋಷಣೆ ಮಾಡುವಂತೆ ಸ್ವಾಮೀಜಿ ಒತ್ತಾಯಿಸುತ್ತಿದ್ದು, ಈಗಾಗಲೇ ಝಳಕಿ, ನಿಪ್ಪಾಣಿ, ಗದಗ, ಬೆಳಗಾವಿ, ಹುಬ್ಬಳ್ಳಿಯಲ್ಲಿ ಸ್ವಾಮೀಜಿ ಹೋರಾಟ ನಡೆಸಿದ್ದಾರೆ. ಇಂದು ಬೃಹತ್ ಹೋರಾಟಕ್ಕೆ ಮೀಸಲಾತಿ ವಿಚಾರ ಸಾಕ್ಷಿಯಾಗಲಿದೆ.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹಾಗೂ ಶಾಸಕ ವಿಜಯಾನಂದ ಕಾಶಪ್ಪನವರ, ವಿನಯ್ ಕುಲಕರ್ಣಿ ಸೇರಿದಂತೆ ಹಲವರು ಭಾಗಿಯಾಗುವ ಸಾಧ್ಯತೆ ಇದೆ.