ಜಮೀನು ಪೋಡಿ ಮಾಡಲು ಹಣಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಬಿದ್ದ ಸರ್ವೆಯರ್..!

ದೊಡ್ಡಬಳ್ಳಾಪುರ: ಮೂರು ಎಕರೆ ಜಮೀನು ಪೋಡಿ ಮಾಡಿಕೊಡಲು ರೈತರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಭೂ ಮಾಪಕ ಅಧಿಕಾರಿಯೊಬ್ಬರು ಲೊಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭೂಮಾಪಕ ಅಧಿಕಾರಿ ವೀರಣ್ಣ ಜೊತೆಗಿದ್ದ ಮಧ್ಯವರ್ತಿ ಸತೀಶ್ ಎಂಬಾತ ಕೂಡ ಲೋಕಾಯುಕ್ತರ ಅತಿಥಿಯಾಗಿದ್ದಾರೆ. ದೊಡ್ಡಬೆಳವಂಗಲದ ಗುಂಡಲಹಳ್ಳಿ ನಿವಾಸಿ ನಂದೀಶ್ ಎಂಬುವರು ತಮ್ಮ ಮೂರು ಎಕರೆ ಜಮೀನು ಪೋಡಿಗೆ ಅರ್ಜಿ ಸಲ್ಲಿಸಿದ್ದರು. ಜಮೀನು ಪೋಡಿ ಮಾಡಿಕೊಡುವಂತೆ ಉಪವಿಭಾಗಾಧಿಕಾರಿ ಆದೇಶ ಹೊರಡಿಸಿದ್ದರು. ನಂದೀಶ್ ಅವರು ಪರ್ಯಾವೇಕ್ಷಕರು ಹಾಗೂ ಭೂಮಾಪಕರ ಕಚೇರಿಗೆ ಬಂದಾಗ ಸರ್ವೇಯರ್ ವೀರಣ್ಣ ಅವರು ಪೋಡಿ ಮಾಡಿಕೊಡಲು … Continue reading ಜಮೀನು ಪೋಡಿ ಮಾಡಲು ಹಣಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಬಿದ್ದ ಸರ್ವೆಯರ್..!