ಬೆಂಗಳೂರು: ಕಾಂಗ್ರೆಸ್ ಸರ್ಕಾರದಿಂದ ನಗರದ ಅಭಿವೃದ್ಧಿಗಾಗಿ ದುಡ್ಡು ಬಿಡುಗಡೆ ಮಾಡುವಂತೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ (Tejasvi Surya) ಡಿಸಿಎಂ ಡಿಕೆ.ಶಿವಕುಮರ್ಗೆ (D.K. Shivakumar) ಪತ್ರ ಬರೆದಿದ್ದಾರೆ.
ಕಾಂಗ್ರೆಸ್ ಸರ್ಕಾರದಲ್ಲಿ ಬೆಂಗಳೂರು ಅಭಿವೃದ್ಧಿಗೆ ದುಡ್ಡು ಬಿಡುಗಡೆ ಮಾಡುವಂತೆ ಬಿಜೆಪಿ ನಾಯಕರು ಒತ್ತಡ ನೀಡುತ್ತಿದ್ದಾರೆ. ಈ ಹಿಂದೆ ಇದೇ ವಿಚಾರವಾಗಿ ಶಾಸಕ ಮುನಿರತ್ನ ಮನವಿ ಮಾಡಿದ್ದರು. ಈಗ ತೇಜಸ್ವಿ ಸೂರ್ಯ ಡಿಕೆಶಿಗೆ ಪತ್ರ ಬರೆದಿದ್ದಾರೆ
Breaking News: ಅಕ್ರಮ ಆಸ್ತಿ ಪ್ರಕರಣ: ಡಿಸಿಎಂ ಡಿ ಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ
ನಗರದ ಸಂಚಾರ ದೃಷಿಯಿಂದ ಬಹುಮುಖ್ಯ ಪ್ರದೇಶವಾಗಿರುವ ಬನಶಂಕರಿಯಲ್ಲಿ ಬಿಎಂಟಿಸಿ ಬಸ್ ನಿಲ್ದಾಣ ಮತ್ತು ಮೆಟ್ರೋ ನಿಲ್ದಾಣಗಳ ನಡುವೆ ಸಾರ್ವಜನಿಕರ ಸಂಚಾರಕ್ಕೆ ಬಹಳ ತೊಂದರೆಯಾಗುತ್ತಿದೆ. ಇವುಗಳ ಮಧ್ಯೆ ದಿನನಿತ್ಯ ಸಂಚಾರ ಮಾಡುವ ಜನರಿಗಾಗಿ ಸ್ಕೈವಾಕ್ ನಿರ್ಮಾಣ ಮಾಡಬೇಕು. ಸ್ಕೈವಾಕ್ ನಿರ್ಮಾಣಕ್ಕೆ ಸರ್ಕಾರದಿಂದ ದುಡ್ಡು ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ